ಕಾರು ಅಡ್ಡಗಟ್ಟಿ ಯುವಕನ ಮೇಲೆ ಮಾರಣಾಂತಿಕ ಹಲ್ಲೆ!

Public TV
0 Min Read
TMK HALLE

ತುಮಕೂರು: ಹಳೆದ್ವೇಷದ ಹಿನ್ನೆಲೆಯಲ್ಲಿ ಕಾರು ಅಡ್ಡಗಟ್ಟಿ ಯುವಕನ ಮೇಲೆ ಮಾರಣಾಂತಿಕವಾಗಿ ಹಲ್ಲೆ ಮಾಡಿರುವ ಘಟನೆ ತುರುವೆಕೆರೆ ತಾಲೂಕಿನ ಮಾಯಸಂದ್ರ ಬಳಿ ನಡೆದಿದೆ.

ಮಾಯಸಂದ್ರ ನಿವಾಸಿ ಸಚಿನ್(30) ಹಲ್ಲೆಗೊಳಗಾದ ದಲಿತ ಯುವಕ. ಕಳೆದ ರಾತ್ರಿ ಸಚಿನ್ ತನ್ನ ಕಾರಿನಲ್ಲಿ ಮನೆಗೆ ಹಿಂದಿರುಗುವಾಗ ಎರಡು ಬೈಕ್ ನಲ್ಲಿ ಬಂದ ನಾಲ್ವರು ದುಷ್ಕರ್ಮಿಗಳು ವಿಳಾಸ ಕೇಳುವ ನೆಪದಲ್ಲಿ ಕಾರು ಅಡ್ಡಗಟ್ಟಿ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಇದರಿಂದ ಸಚಿನ್ ಗಂಭೀರ ಗಾಯಗೊಂಡಿದ್ದಾರೆ.

ಗಾಯಗೊಂಡಿದ್ದ ಸಚಿನ್‍ನನ್ನು ತುರುವೆಕೆರೆ ಸರ್ಕಾರಿ ಆಸ್ಪತ್ರೆಗೆ ದಾಖಲು ಮಾಡಿದ್ದು, ತುರುವೆಕೆರೆ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Share This Article
Leave a Comment

Leave a Reply

Your email address will not be published. Required fields are marked *