ನೇಣು ಬಿಗಿದುಕೊಂಡು ಯುವಕ ಆತ್ಮಹತ್ಯೆಗೆ ಶರಣು!

Public TV
Public TV - Digital Head
0 Min Read

ಬೆಂಗಳೂರು: ಅನುಮಾನಸ್ಪದ ರೀತಿಯಲ್ಲಿ ಯುವಕ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಂಗಳೂರು ಹೊರವಲಯದ ನೆಲಮಂಗಲ ಸಮೀಪದ ತೋಟದ ಗುಡ್ಡದಹಳ್ಳಿಯಲ್ಲಿ ನಡೆದಿದೆ.

ಅರುಣ್ ಕುಮಾರ್(21) ಮನೆಯಲ್ಲಿ ನೇಣು ಬಿಗಿದುಕೊಂಡು ಸಾವನ್ನಪ್ಪಿರುವ ಯುವಕ. ಅರುಣ್ ಕುಮಾರ್ ಬೆಂಗಳೂರಿನಲ್ಲಿ ಕ್ಯಾಬ್ ಓಡಿಸುತಿದ್ದರು. ಆದರೆ ಭಾನುವಾರ ಮನೆಯಲ್ಲಿ ಯಾರು ಇಲ್ಲದ ಸಂದರ್ಭದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಅರುಣ್ ಕುಮಾರ್ ಪ್ರೀತಿ ನಿರಾಕರಣೆ ಹಿನ್ನೆಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಶಂಕಿಸಲಾಗುತ್ತಿದೆ.

ಈ ಘಟನೆ ಸಂಬಂಧ ಮಾದನಾಯಕನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article