ದಾವಣಗೆರೆ: ಬೈಕಿಗೆ ಹಿಂಬದಿಯಿಂದ ಕೆಎಸ್ಆರ್ ಟಿಸಿ ಬಸ್ ಡಿಕ್ಕಿ ಹೊಡೆದ ಪರಿಣಾಮ ಯುವಕನೊಬ್ಬ ಸ್ಥಳದಲ್ಲೇ ಮೃತ ಪಟ್ಟಿ ಘಟನೆ ದಾವಣಗೆರೆ ಸಮೀಪದ ಹೊನ್ನೂರು ಗ್ರಾಮ ಬಳಿ ಈ ಘಟನೆ ಸಂಭವಿಸಿದೆ.
ಅಪಘಾತ ದಲ್ಲಿ ಸಾವನ್ನಪ್ಪಿದ ಯುವಕನ ತಲೆ ಸಂಪೂರ್ಣ ಜಜ್ಜಿದ್ದರಿಂದ ಗುರುತು ಪತ್ತೆಯಾಗಿಲ್ಲ. ರಾಷ್ಟ್ರೀಯ ಹೆದ್ದಾರಿ ನಾಲ್ಕರಲ್ಲಿ ದಾವಣಗೆರೆ ಕಡೆ ಬರುತ್ತಿದ್ದ ಬೈಕ್ ಸವಾರನಿಗೆ ಬೆಂಗಳೂರಿನ ಕಡೆಯಿಂದ ಬರುತ್ತಿದ್ದ ಐರಾವತ ಬಸ್ಸು ಡಿಕ್ಕಿ ಹೊಡೆದಿದೆ.
- Advertisement 2
ಡಿಕ್ಕಿ ಹೊಡೆದ ಪರಿಣಾಮ ಯುವಕನ ತಲೆ ಸಂಪೂರ್ಣವಾಗಿ ಜಜ್ಜಿ ಹೋಗಿದ್ದು, ಇನ್ನು ಗುರುತು ಪತ್ತೆಯಾಗಿಲ್ಲ. ದಾವಣಗೆರೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿದ್ದಾರೆ. ಸದ್ಯ ಮೃತ ದೇಹವನ್ನು ಜಿಲ್ಲಾಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.