ದಾವಣಗೆರೆ: ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಯುವಕನಿಗೆ ಓವರ್ ಡೋಸ್ ಔಷಧಿ ನೀಡಿ ಸಾವನ್ನಪ್ಪುವಂತೆ ಮಾಡಿದ್ದಾರೆ ಎಂದು ಅರೋಪಿಸಿ ಕ್ಲಿನಿಕ್ ಮುಂಭಾಗ ರೋಗಿಯ ಸಂಬಂಧಿಕರು ಪ್ರತಿಭಟನೆ ಮಾಡಿದ ಘಟನೆ ನಡೆದಿದೆ.
ನಗರದ ಕೆ ಬಿ ಬಡಾವಣೆಯಲ್ಲಿರುವ ಜಾಧವ್ ಕ್ಲಿನಿಕ್ ಗೆ ದಾವಣಗೆರೆ ಜಿಲ್ಲೆಯ ಹೊನ್ನೂರು ಗ್ರಾಮದ ಮಾರುತಿ (18) ಯನ್ನು ದಾಖಲು ಮಾಡಿದ್ರು. ರಾತ್ರಿ 8 ಗಂಟೆಯಿಂದ 9 ಗಂಟೆಯ ಒಳಗೆ ಐದು ಇಂಜೆಕ್ಷನ್, 2 ಗ್ಲೂಕೋಸ್ ನೀಡಿದ್ರು. ನಂತರ ಹಾಗೇ ಡಿಸ್ಚಾರ್ಜ್ ಮಾಡಿ ಕಳಿಸಿದ್ದಾರೆ.
ಆದ್ರೆ ಡಿಸ್ಚಾರ್ಜ್ ಮಾಡಿ 2 ಕಿಲೋಮೀಟರ್ ಸಾಗುತ್ತಿದ್ದಂತೆಯೇ ಯುವಕನ ಬಾಯಲ್ಲಿ ನೊರೆ ಬಂದಿದೆ. ಇದರಿಂದ ಗಾಬರಿಗೊಂಡ ಕುಟುಂಬಸ್ಥರು ಸ್ಥಳೀಯ ಅಸ್ಪತ್ರೆಗೆ ಕರೆದೊಯ್ದಿದ್ದಾರೆ. ಆದ್ರೆ ಅಷ್ಟೊತ್ತಿಗಾಗಲೇ ಮಾರುತಿ ಮೃತಪಟ್ಟಿದ್ದಾನೆ ಅಂತ ವೈದ್ಯರು ಹೇಳಿದ್ದಾರೆ.
ಇದರಿಂದ ಅಕ್ರೋಶಗೊಂಡ ಯುವಕನ ಸಂಬಂಧಿಕರು ಜಾಧವ್ ಕ್ಲಿನಿಕ್ ಬಳಿ ವೈದ್ಯರ ವಿರುದ್ಧ ಪ್ರತಿಭಟನೆ ನಡೆಸಿದ್ದಾರೆ. ಈ ಸಂಬಂಧ ಕೆ.ಟಿ.ಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.