ಬೆಂಗಳೂರು: ಕೊಲೆ ಮಾಡುವ ಉದ್ದೇಶದಿಂದ ಕಿಡ್ನ್ಯಾಪ್ ಮಾಡಿ ಥಳಿಸಿದ ಘಟನೆ ಇಂದಿರಾನಗರದಲ್ಲಿ ನಡೆದಿದೆ.
ಅರುಣ್ ಕುಮಾರ್ ಹಲ್ಲೆಗೊಳಗಾದ ಯುವಕ. ಶನಿವಾರ ಸಂಜೆ ವೇಳೆ ಇಂದಿರಾನಗರ ಡಿಪೋ ಬಳಿ ತಾಯಿಯನ್ನು ಬಿಟ್ಟು ಬರುತ್ತಿದ್ದಾಗ 10 ಜನ ದುಷ್ಕರ್ಮಿಗಳು ಅರುಣ್ ನನ್ನು ಕಿಡ್ನ್ಯಾಪ್ ನಾಡಿ ಹತ್ತಿರದ ಗ್ರೌಂಡ್ಗೆ ಕರೆದೊಯ್ದಿದ್ದರು.
ಅಪಹರಣಗೈದ ಬಳಿಕ ಮಾತನಾಡಲೂ ಬಿಡದೆ ಕೊಲೆ ಮಾಡುವ ಉದ್ದೇಶದಿಂದ ಡ್ರಾಗರ್, ಚಾಕುಗಳಿಂದ ಹಲ್ಲೆಯನ್ನ ನಡೆಸಿದ್ರು. ಬಳಿಕ ಅಲ್ಲಿಂದ ಹೇಗೋ ತಪ್ಪಿಸಿಕೊಂಡು ಬಂದ ಅರುಣ್, ಪೋಷಕರಿಗೆ ವಿಷಯ ತಿಳಿಸಿದ್ದಾನೆ. ನಂತರ ಆತನನ್ನು ಚಿನ್ಮಯಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಿದ್ರು.
ಕಳೆದ ಮೂರು ತಿಂಗಳ ಹಿಂದೆ ಮನೆಯ ಬಳಿ ವಿಜಯ್ ಕುಮಾರ್ ಎಂಬಾತನ ಜೊತೆ ಕಿರಿಕ್ ಮಾಡಿಕೊಂಡಿದ್ದ ಅರುಣ್, ನಂತರ ಪೊಲೀಸ್ ಠಾಣೆಯಲ್ಲಿ ರಾಜಿ ಸಂಧಾನದ ಬಳಿಕ ವಿಜಯ್ ಕುಮಾರ್ ಕೊಲೆ ಬೆದರಿಕೆ ಹಾಕಿದ್ದನಂತೆ. ಹೀಗಾಗಿ ಈತನೆ ಕೊಲೆಗೆ ಯತ್ನಿಸಿದ್ದಾನೆ ಎಂದು ಪೋಷಕರು ಆರೋಪಿಸಿದ್ದಾರೆ.
ಈ ಸಂಬಂಧ ಇಂದಿರಾನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.