ಮೈಸೂರು: ಹಾಡಹಗಲೇ ದುಷ್ಕರ್ಮಿಗಳ ತಂಡ ಯುವಕನೊಬ್ಬನನ್ನು ಅಪಹರಣ ಮಾಡಿರುವ ಘಟನೆ ಮೈಸೂರಿನ ರಾಜೀವ್ ನಗರದಲ್ಲಿ ನಡೆದಿದೆ.
ಸಾರ್ವಜನಿಕರ ಎದುರೇ ಮಾರಕಾಸ್ತ್ರ ಝಳಪಿಸಿದ ಗ್ಯಾಂಗ್ ಇನ್ನೋವಾ ಕಾರಲ್ಲಿ ಯುವಕನನ್ನು ಕಿಡ್ನಾಪ್ ಮಾಡಿದೆ. ರಾಜೀವ ನಗರದಲ್ಲಿ ಕೆಎ02, ಡಿ 233 ನಂಬರ್ನ ಕಾರಲ್ಲಿ ಬಂದ ಖದೀಮರು ಟೀ ಅಂಗಡಿ ಮುಂದೆ ನಿಂತಿದ್ದ ಯುವಕನನ್ನು ಅಪಹರಿಸಿದ್ದಾರೆ.
ಈ ವೇಳೆ ಗುಂಪಿನಿಂದ ತಪ್ಪಿಸಿಕೊಳ್ಳಲು ಯುವಕ ಯತ್ನಿಸಿದ್ದು, ಬೆನ್ನು ಹತ್ತಿ ಆತನ್ನನು ಹಿಡಿದು ಕಾರಿಗೆ ಹಾಕಿಕೊಂಡು ತಂಡ ಅಲ್ಲಿಂದ ಪರಾರಿಯಾಗಿದೆ. ಹಣಕಾಸು ವಿಷಯಕ್ಕೆ ಕಿಡ್ನಾಪ್ ಆಗಿರಬಹುದೆಂದು ಶಂಕಿಸಲಾಗಿದೆ. ಆದ್ರೆ ಯುವಕ ಯಾರು ಅನ್ನೋದು ಇನ್ನೂ ಖಚಿತವಾಗಿಲ್ಲ.
ಸ್ಥಳಕ್ಕೆ ಉದಯಗಿರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಸ್ಥಳೀಯರು ಮಾಹಿತಿ ನೀಡಲು ಹೆದರುತ್ತಿದ್ದಾರೆ. ಪೊಲೀಸರು ಯುವಕನ ಮಾಹಿತಿ ಕಲೆ ಹಾಕುತ್ತಿದ್ದಾರೆ.