ಮಾರಕಾಸ್ತ್ರಗಳಿಂದ ಕತ್ತು ಕೊಯ್ದು ಯುವಕನ ಬರ್ಬರ ಹತ್ಯೆ

Public TV
0 Min Read
GLB MURDER AV 5

ಕಲಬುರಗಿ: ಮಾರಕಾಸ್ತ್ರಗಳಿಂದ ಯುವಕನ ಕತ್ತು ಕೊಯ್ದು ಬರ್ಬರವಾಗಿ ಕೊಲೆ ಮಾಡಿ ಎಸೆದಿರುವ ಘಟನೆ ಕಲಬುರಗಿ ತಾಲೂಕಿನ ನಂದೂರ(ಬಿ) ಗ್ರಾಮದ ಪ್ರಾಥಮಿಕ ಅರೋಗ್ಯ ಕೇಂದ್ರದ ಬಳಿ ಬುಧವಾರ ತಡರಾತ್ರಿ ನಡೆದಿದೆ.

ಮೃತ ಯುವಕನನ್ನು ಮಂಜುನಾಥ್ ಮಾಶಾಳ ಎಂಬುವುದಾಗಿ ಗುರುತಿಸಲಾಗಿದ್ದು, ಅದೇ ಗ್ರಾಮದವನು ಎನ್ನಲಾಗಿದೆ.

ಕೊಲೆಯಾದ ಯುವಕನ ಮೇಲೆ ಕೂಡ ಕಲಬುರಗಿ ವಿವಿ ಪೊಲೀಸ್ ಠಾಣೆಯಲ್ಲಿ ಕಳ್ಳತನದ ಪ್ರಕರಣಗಳಿವೆ ಎಂಬುವುದಾಗಿ ಪೊಲಿಸರು ತಿಳಿಸಿದ್ದಾರೆ. ಆದ್ರೆ ಈ ಕೊಲೆಗೆ ಕಾರಣವೇನೆಂದು ತಿಳಿದುಬಂದಿಲ್ಲ.

ಸದ್ಯ ವಿವಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿ ಆರೋಪಿಗಳಿಗಾಗಿ ಶೋಧ ನಡೆಸುತ್ತಿದ್ದಾರೆ.

GLB MURDER AV 3

GLB MURDER AV 6

GLB MURDER AV 2 1

GLB MURDER AV 1 1

GLB MURDER AV 7

Share This Article
Leave a Comment

Leave a Reply

Your email address will not be published. Required fields are marked *