ಬೆಂಗ್ಳೂರಲ್ಲಿ ದರೋಡೆಕೋರರ ಅಟ್ಟಹಾಸ – ಯುವಕನನ್ನು ಕೊಂದು ಮೊಬೈಲ್, ಪರ್ಸ್ ಕಳ್ಳತನ

Public TV
0 Min Read
MURDER11

ಬೆಂಗಳೂರು: ಮೊಬೈಲ್ ದೋಚುವ ನೆಪದಲ್ಲಿ ಯುವಕನೊಬ್ಬನನ್ನು ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಬೆಂಗಳೂರಿನ ನಾಯಂಡಹಳ್ಳಿ ಮೆಟ್ರೋ ನಿಲ್ದಾಣ ಬಳಿ ನಡೆದಿದೆ.

MURDER

ತಡರಾತ್ರಿ 11.40ರ ಸುಮಾರಿಗೆ ಮೆಟ್ರೋ ನಿಲ್ದಾಣ ಮುಂಬಾಗದಲ್ಲಿ ನಡೆದುಕೊಂಡು ಬರುತ್ತಿದ್ದ ಯುವಕನನ್ನು ಮೊಬೈಲ್ ರಾಬರಿ ಮಾಡುವ ದುಷ್ಕರ್ಮಿಗಳು ಚಾಕುವಿನಿಂದ ಎದೆಗೆ ಇರಿದು ಕೊಲೆ ಮಾಡಿ ಮೊಬೈಲ್ ಮತ್ತು ಪರ್ಸ್ ದೋಚಿದ್ದಾರೆ. ಯುವಕನ ಯಾರು? ಎಲ್ಲಿಯವರು? ಎಂಬುದರ ಬಗ್ಗೆ ತಿಳಿದುಬಂದಿಲ್ಲ.

ಘಟನೆ ಸಂಬಂಧ ಬ್ಯಾಟರಾಯನಪುರ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿದೆ.

BYATARAYANAPURA

Share This Article
Leave a Comment

Leave a Reply

Your email address will not be published. Required fields are marked *