ಒಂದು ತಿಂಗಳಲ್ಲಿ ನಿಶ್ಚಿತಾರ್ಥ, ಅಷ್ಟರೊಳಗೆ ಬೀದಿ ಹೆಣವಾದ ಯುವಕ

Public TV
1 Min Read
engagement

ಬೆಂಗಳೂರು: ಒಂದು ತಿಂಗಳಿನಲ್ಲಿ ನಿಶ್ಚಿತಾರ್ಥ ಮಾಡಿಕೊಳ್ಳಬೇಕಿದ್ದ ಯುವಕನ ಕತ್ತು ಸೀಳಿ ದುಷ್ಕರ್ಮಿಗಳು ಬರ್ಬರವಾಗಿ ಹತ್ಯೆಗೈದಿರುವ ಘಟನೆ ಬೆಂಗಳೂರಿನ ಹೊರವಲಯದಲ್ಲಿ ನಡೆದಿದೆ.

ಕೊಲೆಯಾದ ವ್ಯಕ್ತಿಯನ್ನು ಸೋನು ಥಾಮಸ್ ಎಂದು ಗುರುತಿಸಲಾಗಿದ್ದು, ಇವರು ಮೂಲತಃ ಕೇಳದವರಾಗಿದ್ದಾರೆ. ಜಿಗಣಿ ಕೈಗಾರಿಕಾ ಪ್ರದೇಶದ ಟಾಟಾ ಅಡ್ವಾನ್ಸ್ ಕಂಪನಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸೋನು ಥಾಮಸ್ ಸೆಕೆಂಡ್ ಶಿಫ್ಟ್ ಮುಗಿಸಿಕೊಂಡು ರೂಮಿನತ್ತ ಹೊರಟಿದ್ದರು.  ಇದನ್ನೂ ಓದಿ: ದೇಗುಲದ ಅರ್ಚಕರ ತಲೆ ಕಡಿಯೋದಾಗಿ ಬೆದರಿಕೆ ಪತ್ರ – ಉದಯಪುರ ಮತ್ತೆ ಉದ್ವಿಗ್ನ

CRIME 2

ಈ ವೇಳೆ ಸೋನು ಥಾಮಸ್ ಅವರನ್ನು ಅಡ್ಡಗಟ್ಟಿದ ಮೂವರು ಕಿಡಿಗೇಡಿಗಳು ಕುತ್ತಿಗೆಗೆ ಚಾಕು ಹಿಡಿದು ಮೊಬೈಲ್ ಕೊಡು ಎಂದು ಕೇಳಿದ್ದಾರೆ. ಮೊಬೈಲ್ ನೀಡಲು ಸೋನು ಥಾಮಸ್ ನಿರಾಕರಿಸಿದ್ದಕ್ಕೆ ಚಾಕುವಿನಿಂದ ಕುತ್ತಿಗೆ ಸೀಳಿ ಮೊಬೈಲ್ ಜೊತೆಗೆ ಆರೋಪಿಗಳು ಎಸ್ಕೇಪ್ ಆಗಿದ್ದಾರೆ.

ಈ ಘಟನೆ ಬಳಿಕ ಜಿಗಣಿ ಕೈಗಾರಿಕಾ ಪ್ರದೇಶದಲ್ಲಿ ಪೊಲೀಸರು ಯಾವುದೇ ರೀತಿಯಲ್ಲಿ ಗಸ್ತು ಸೇರಿದಂತೆ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೊಮ್ಮಾಯಿ ಸರ್ಕಾರಕ್ಕೆ ವರಿಷ್ಠರ ತರಾಟೆ- ಓರ್ವ ಸಚಿವರಿಗೆ ನಾಲ್ವರನ್ನು ಗೆಲ್ಲಿಸುವ ಟಾಸ್ಕ್

Live Tv
[brid partner=56869869 player=32851 video=960834 autoplay=true]

Share This Article
Leave a Comment

Leave a Reply

Your email address will not be published. Required fields are marked *