ಮೈಸೂರು: ಜಿಲ್ಲೆಯ ಕಡಕೊಳ ಬಳಿ ಸ್ಕೂಟರ್ ಮೇಲೆ ಅನುಮಾನಾಸ್ಪದ ಸ್ಥಿತಿಯಲ್ಲಿ ಯುವಕನೋರ್ವನ ಶವ ಪತ್ತೆಯಾಗಿದೆ.
ನಂಜನಗೂಡು ತಾಲೂಕಿನ ಅಡಕನಹಳ್ಳಿ ಗ್ರಾಮದ ಕೃಷ್ಣ(22) ಮೃತ ದುರ್ದೈವಿ. ಸ್ಕೂಟರ್ ಮೇಲೆ ಕೃಷ್ಣನ ಮೃತದೇಹ ಪತ್ತೆಯಾಗಿದೆ. ಮೃತದೇಹ ಸಿಕ್ಕಿರುವ ಸ್ಥಳದಿಂದ ಸುಮಾರು 1 ಕಿಲೋ ಮೀಟರ್ ಸ್ಕೂಟರ್ ಎಳೆದು ತಂದಿರುವ ಗುರುತು ಪತ್ತೆಯಾಗಿದೆ. ಅಲ್ಲದೆ ಕೃಷ್ಣನ ಮೈ ಮೇಲೆ ಗಾಯದ ಗುರುತುಗಳಿವೆ. ಹೀಗಾಗಿ ಯಾರೋ ಕೊಲೆ ಮಾಡಿ ಕಡಕೊಳ ಬಳಿ ತಂದು ಹಾಕಿರುವ ಶಂಕೆ ವ್ಯಕ್ತವಾಗಿದೆ.
- Advertisement 2
- Advertisement 3
ಮಂಗಳವಾರ ರಾತ್ರಿ ಮನೆಯಿಂದ ಹೋಗಿದ್ದ ಕೃಷ್ಣ ವಾಪಸ್ ಬಂದಿರಲಿಲ್ಲ. ಆದರೆ ಇಂದು ಬೆಳಗ್ಗೆ ಕೃಷ್ಣ ಶವವಾಗಿ ಪತ್ತೆಯಾಗಿದ್ದಾನೆ. ಈ ಬಗ್ಗೆ ತಿಳಿಯುತ್ತಿದ್ದಂತೆಯೇ ನಂಜನಗೂಡು ಗ್ರಾಮಾಂತರ ಪೊಲೀಸರು ಹಾಗೂ ಮೈಸೂರು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.