ಹುಬ್ಬಳ್ಳಿ: ನೀರಸಾಗರ ಜಲಾಶಯದಲ್ಲಿ ಸೆಲ್ಫಿ ತೆಗೆದುಕೊಳ್ಳುತ್ತಿದ್ದ ವೇಳೆ ಯುವಕನೊಬ್ಬ ಪ್ರವಾಹದ ನೀರಿನಲ್ಲಿ ಕೊಚ್ಚಿ ಹೋಗಿರುವ ಘಟನೆ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನಲ್ಲಿ ನಡೆದಿದೆ.
ಕಿರಣ್ ರಜಪೂತ(22) ಮೃತ ಯುವಕನಾಗಿದ್ದಾನೆ. ಕಲಘಟಗಿ ತಾಲೂಕಿನ ಬೇಗೂರು ಗ್ರಾಮದ ನಿವಾಸಿಯಾಗಿರುವ ಕಿರಣ್, ಭಾನುವಾರ ತನ್ನ ಗೆಳೆಯರೊಡನೆ ಪ್ರವಾಸಕ್ಕೆಂದು ಹೋಗಿದ್ದ. ಜಲಾಶಯದ ದಡದಲ್ಲಿ ನಿಂತು ಸೆಲ್ಫಿ ತೆಗೆದುಕೊಳ್ಳುತ್ತಿರುವ ವೇಳೆಯಲ್ಲಿ ನೀರಿನ ರಭಸ ಹೆಚ್ಚಾಗಿದ್ದರಿಂದ ಕಿರಣ್ ಕೊಚ್ಚಿ ಹೋಗಿದ್ದಾನೆ. ಇದನ್ನೂ ಓದಿ: ವರದಾ, ತುಂಗಭದ್ರಾ ನದಿಯಲ್ಲಿ ಹೆಚ್ಚಿದ ನೀರು – ಮೆಕ್ಕೆಜೋಳ ಸೇರಿ ವಿವಿಧ ಬೆಳೆ ಜಲಾವೃತ
ಕಳೆದ 24 ಗಂಟೆಯಿಂದ ಕಿರಣ್ಗಾಗಿ ಹುಡುಕಾಟ ನಡೆಸಿದ ಅಗ್ನಿಶಾಮಕ ದಳದ ಸಿಬ್ಬಂದಿಗೆ ಇದೀಗ ಮೃತದೇಹ ಪತ್ತೆಯಾಗಿದ್ದು, ಕಿರಣ್ ಕುಟುಂಬಸ್ಥರು ಆಕ್ರಂದನ ಮುಗಿಲು ಮುಟ್ಟಿದೆ. ಈ ಕುರಿತು ಕಲಘಟಗಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಉಕ್ಕಿ ಹರಿಯುವ ತುಂಗಭದ್ರಾ ನದಿಯಲ್ಲಿ ಪ್ರವಾಸಿಗರ ಮೋಜುಮಸ್ತಿ – ಮಿತಿಮೀರಿದ ಹುಚ್ಚಾಟ