ಬೆಂಗಳೂರು: ಯಾವುದೇ ಕಾರಣವಿಲ್ಲದೆ ವ್ಯಕ್ತಿಯೊಬ್ಬನನ್ನು ಮಾರಣಾಂತಿಕವಾಗಿ ಹಲ್ಲೆ ನಡೆಸಿದ ಘಟನೆ ಬೆಂಗಳೂರಿನ ಚಾಮರಾಜಪೇಟೆಯ 5 ನೇ ಮುಖ್ಯರಸ್ತೆಯಲ್ಲಿ ನಡೆದಿದೆ.
ಗೋಪಿನಾಥ್ ಹಲ್ಲೆಗೊಳಗಾದ ವ್ಯಕ್ತಿ. ಗೋಪಿನಾಥ್ ತನ್ನ ಸ್ನೇಹಿತರ ಜೊತೆ ನಿಂತುಕೊಂಡು ಮಾತನಾಡುತ್ತಿದ್ದನು. ಈ ವೇಳೆ ವ್ಯಕ್ತಿಯೊಬ್ಬ ತನ್ನ ಗ್ಯಾಂಗ್ ಜೊತೆ ಬಂದು ಏಕಾಏಕಿ ಕೈಯಲ್ಲಿದ್ದ ರಾಡ್ನಿಂದ ಮಾರಣಾಂತಿಕ ಹಲ್ಲೆ ಮಾಡಿದ್ದಾನೆ. ಈ ಹಲ್ಲೆ ನಡೆದಿರುವುದು ಯಾವುದೋ ಹಳೆ ದ್ವೇಷಕ್ಕೆ ಅಲ್ಲ. ಆದರೆ ಯಾವುದೇ ಕಾರಣವಿಲ್ಲದೆ ಹೀಗೆ ವ್ಯಕ್ತಿಯೋರ್ವನಿಗೆ ಹಲ್ಲೆ ನಡೆಸಿದ್ದಾರೆ.
ಈ ಬಗ್ಗೆ ವೆಸ್ಟ್ ಡಿಸಿಪಿ ರವಿ ಚೆನ್ನಣನವರ್ ಅವರು ಪ್ರತಿಕ್ರಿಯಿಸಿ, “ಮೂರು ಜನ ಹುಡುಗರು ಈ ರೀತಿ ಹಲ್ಲೆ ಮಾಡಿರುವುದು ಗಮನಕ್ಕೆ ಬಂದಿದೆ. ಸದ್ಯ ಅಲ್ಲಿನ ಸಿಸಿಟಿವಿ ಆಧರಿಸಿ ತನಿಖೆ ಮುಂದುವರಿಸಿದ್ದೇವೆ. ಯಾವ ಕಾರಣಕ್ಕಾಗಿ ಗಲಾಟೆ ನಡೆಯಿತು ಎನ್ನುವುದು ತನಿಖೆಯಿಂದಷ್ಟೇ ಬಯಲು ಆಗಬೇಕಿದೆ” ಎಂದು ಹೇಳಿದ್ದಾರೆ.
ಏನೂ ಮಾಡದೇ ಸುಮ್ಮನೆ ಇದ್ದ ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದಾರೆ. ಅಲ್ಲದೇ ಸ್ಥಳದಲ್ಲಿದ್ದ ಸಿಸಿಟಿವಿಯಲ್ಲಿ ಕೃತ್ಯ ಸೆರೆಯಾಗುತ್ತಿದ್ದರೂ ಕೂಡ ರಾಜಾರೋಷವಾಗಿ ಹಲ್ಲೆ ಮುಂದಾಗಿದ್ದಾರೆ.
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್ಲೋಡ್ ಮಾಡಿ: play.google.com/publictv