ಹೊಸ ವರ್ಷಕ್ಕೆ ಯುವಕರಿಂದ ಕ್ಯಾಂಡಲ್ ಮಾರ್ಚ್

Public TV
1 Min Read
ckd new year celebretion

ಬೆಳಗಾವಿ (ಚಿಕ್ಕೋಡಿ): ಅಥಣಿ ಪಟ್ಟಣದ ಜನತೆ ಕ್ಯಾಂಡಲ್ ಮಾರ್ಚ್ ಮಾಡುವ ಮೂಲಕ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.

ಹೊಸ ವರ್ಷ ಬಂದ್ರೆ ಸಾಕು ಪಾರ್ಟಿ ಮಾಡ್ಕೊಂಡು, ಮೋಜು ಮಸ್ತಿ ಅಂತ ಆಚರಿಸುವ ಯುವಕರೇ ಹೆಚ್ಚು. ಆದ್ರೆ ಅಥಣಿ ಪಟ್ಟಣದಲ್ಲಿ ಮಾತ್ರ ಯುವಕರು ಶಾಂತಿಯುತವಾಗಿ ಮೇಣದ ಬತ್ತಿ ಬೆಳಗಿಸಿ, ಮೆರವಣಿಗೆ ಹೋಗುವ ಮೂಲಕ ವಿಶಿಷ್ಠವಾಗಿ ಹೊಸ ವರ್ಷವನ್ನು ಆಚರಿಸಿದ್ದಾರೆ. ಹಾಗೆಯೇ ಈ ಅರ್ಥಪೂರ್ಣ ಆಚರಣೆಗೆ ಸ್ಥಳೀಯರು ಕೂಡ ಸಾಥ್ ನೀಡಿದ್ದು, ನಗರದ ಅಂಬೇಡ್ಕರ್ ವೃತ್ತದಲ್ಲಿ ಜಮಾಯಿಸಿದ 20ಕ್ಕೂ ಹೆಚ್ಚು ಮಂದಿ ಕ್ಯಾಂಡಲ್ ಮಾರ್ಚ್ ನಡೆಸುವ ಮೂಲಕ ಮೋಜು ಮಸ್ತಿಯಿಂದ ಹೊರಗುಳಿದು ಶಾಂತಿಯುತವಾಗಿ ಹೊಸ ವರ್ಷವನ್ನು ಸ್ವಾಗತಿಸಿದ್ದಾರೆ.

ckd new year celebretion 1

2018ರ ಸಾಲಿನಲ್ಲಿ ಕರ್ನಾಟಕದಲ್ಲಾದ ದುರಂತಗಳಿಂದ ಸಾವನ್ನಪ್ಪಿದ ಜನರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಮೇಣದ ಬತ್ತಿ ಹೊತ್ತಿಸಿ ಪ್ರಾರ್ಥಿಸಿದರು. ಕೊಡಗಿನಲ್ಲಾದ ಪ್ರವಾಹದಲ್ಲಿ ಮಡಿದವರಿಗೆ ಮತ್ತು ಸುಳ್ವಾಡಿ ದುರಂತ ಹಾಗೂ ಮಂಡ್ಯ ಬಸ್ ಅಪಘಾತದಲ್ಲಿ ಮೃತಪಟ್ಟವರ ಆತ್ಮಕ್ಕೆ ಶಾಂತಿ ಕೋರಿ ಪ್ರಾರ್ಥಿಸುವ ಮೂಲಕ ಹೊಸ ವರ್ಷದ ಆಚರಣೆಯನ್ನು ಅರ್ಥಪೂರ್ಣವಾಗಿ ಯುವಕರು ಆಚರಿಸಿದರು.

ckd new year celebretion 2

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv, ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv

Share This Article
Leave a Comment

Leave a Reply

Your email address will not be published. Required fields are marked *