Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ನೆರೆಯಿಂದ ಸೂರು ಕಳೆದುಕೊಂಡಿದ್ದ ಅಜ್ಜ, ಅಜ್ಜಿಗೆ ಮನೆ ನಿರ್ಮಿಸಿ ಆಸರೆಯಾದ ಯುವಾ ಬ್ರಿಗೇಡ್
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | ನೆರೆಯಿಂದ ಸೂರು ಕಳೆದುಕೊಂಡಿದ್ದ ಅಜ್ಜ, ಅಜ್ಜಿಗೆ ಮನೆ ನಿರ್ಮಿಸಿ ಆಸರೆಯಾದ ಯುವಾ ಬ್ರಿಗೇಡ್

Districts

ನೆರೆಯಿಂದ ಸೂರು ಕಳೆದುಕೊಂಡಿದ್ದ ಅಜ್ಜ, ಅಜ್ಜಿಗೆ ಮನೆ ನಿರ್ಮಿಸಿ ಆಸರೆಯಾದ ಯುವಾ ಬ್ರಿಗೇಡ್

Public TV
Last updated: November 13, 2019 2:49 pm
Public TV
Share
3 Min Read
smg yuva brigade 4
SHARE

– ಸಂಪೂರ್ಣ ನೆಲಸಮವಾಗಿತ್ತು ಗುಡಿಸಲು
– ನ. 15 ರಂದು ಮನೆಯ ಗೃಹಪ್ರವೇಶ
– ಚಕ್ರವರ್ತಿ ಸೂಲಿಬೆಲೆಯವರಿಂದ ಕೀ ಹಸ್ತಾಂತರ

ಶಿವಮೊಗ್ಗ: ರಾಜ್ಯ ಸರ್ಕಾರ ನೆರೆ ಸಂತ್ರಸ್ತರಿಗೆ ಇನ್ನು ಸರಿಯಾಗಿ ಪರಿಹಾರದ ಹಣ ವಿತರಣೆ ಮಾಡಿಲ್ಲ. ಆದರೆ ಶಿವಮೊಗ್ಗದಲ್ಲಿ ನೆರೆ ಸಂತ್ರಸ್ತ ವೃದ್ಧ ದಂಪತಿಗೆ ಯುವಾ ಬ್ರಿಗೇಡ್ ಸದಸ್ಯರು ಮನೆ ನಿರ್ಮಿಸಿಕೊಟ್ಟಿದ್ದಾರೆ.

ರಾಜ್ಯದಲ್ಲಿ ಕಳೆದ ಎರಡು ತಿಂಗಳ ಹಿಂದಷ್ಟೇ ಕಂಡು ಕೇಳರಿಯದ ಭೀಕರ ಪ್ರವಾಹ ಬಂದು ಸಾಕಷ್ಟು ಹಾನಿ ಮಾಡಿತ್ತು. ಮಳೆ ಹೆಚ್ಚಾದ ಕಾರಣ ಮಲೆನಾಡು ಜಿಲ್ಲೆ ಶಿವಮೊಗ್ಗದಲ್ಲಿಯೂ ಕೂಡ ತುಂಗಾ ನದಿ ಉಕ್ಕಿ ಹರಿದು, ರಾಜಕಾಲುವೆಗಳ ಮೂಲಕ ಅದೆಷ್ಟೋ ಬಡಾವಣೆಗಳಿಗೆ ನೀರು ನುಗ್ಗಿ ಅವಾಂತರ ಸೃಷ್ಟಿಯಾಗಿತ್ತು. ಈ ಪ್ರವಾಹದಲ್ಲಿ ನೂರಾರು ಮನೆಗಳು ನೆಲಕಚ್ಚಿದ್ದವು. ನೆರೆಯಿಂದ ನಲುಗಿದ ಜನರು ಅಕ್ಷರಶಃ ಬೀದಿಗೆ ಬಿದ್ದಿದ್ದರು. ಶಿವಮೊಗ್ಗದ ಟ್ಯಾಂಕ್ ಮೊಹಲ್ಲಾ ಬಡಾವಣೆಯ ನಿವಾಸಿ ಮುನಿಯಪ್ಪ ಹಾಗೂ ನರಸಮ್ಮ ವೃದ್ಧ ದಂಪತಿ ಕೂಡ ನೆರೆ ಅವಘಡಕ್ಕೆ ಮನೆ ಕಳೆದುಕೊಂಡು ಅಕ್ಷರಶಃ ಬೀದಿಗೆ ಬಿದ್ದಿದ್ದರು. ಇದನ್ನೂ ಓದಿ:ಮಿಮ್ಸ್ ನೋಡಿ ಯುವ ಬ್ರಿಗೇಡ್‍ನಿಂದ ಚಾಮುಂಡಿ ಬೆಟ್ಟದಲ್ಲಿ ಸ್ವಚ್ಛತಾ ಕಾರ್ಯ

smg yuva brigade 1

ನೆರೆಗೆ ಅಜ್ಜ-ಅಜ್ಜಿಯ ಮನೆ ಸಂಪೂರ್ಣವಾಗಿ ನೆಲಸಮವಾಗಿತ್ತು. ಇದ್ದ ಒಂದು ಗುಡಿಸಲು ಕಳೆದುಕೊಂಡು ಪಡಬಾರದ ಕಷ್ಟ ಪಡುವಂತಾಗಿತ್ತು. ಇರುವ ಒಬ್ಬ ಮಗ ತನಗೂ ಇದಕ್ಕೂ ಸಂಬಂಧವಿಲ್ಲವೆಂಬಂತೆ ಇದ್ದುಬಿಟ್ಟಿದ್ದನು. ಇಂತಹ ಸಂದರ್ಭದಲ್ಲಿ ಶಿವಮೊಗ್ಗದ ಯುವಾ ಬ್ರಿಗೇಡ್ ಸಂಘಟನೆ ತಂಡ ಇವರ ನೆರವಿಗೆ ಧಾವಿಸಿತ್ತು. ಇದನ್ನೂ ಓದಿ:ಯುವ ಬ್ರಿಗೇಡ್‍ನಿಂದ ಕುಮಾರ ಸಂಸ್ಕಾರ – ಬೆಚ್ಚಿ ಬೀಳುವ ಮಟ್ಟದಲ್ಲಿ ತ್ಯಾಜ್ಯದ ರಾಶಿ ಪತ್ತೆ

ಯುವಾ ಬ್ರಿಗೇಡ್ ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನ ತಂಡದ ಸದಸ್ಯರು ಈ ಅಜ್ಜ-ಅಜ್ಜಿಯ ನೆರವಿಗೆ ಧಾವಿಸಿದ್ದು, ಗುಡಿಸಲು ಬಿದ್ದು ಜೀವನವೇ ಹೋಯ್ತು ಎಂದುಕೊಂಡಿದ್ದ ವೃದ್ಧ ದಂಪತಿಗೆ ಆಸರೆಯಾಗಿ ಮನೆ ನಿರ್ಮಿಸಿಕೊಟ್ಟಿದ್ದಾರೆ. ಸುಮಾರು 1.25 ಲಕ್ಷ ರೂ. ವೆಚ್ಚದಲ್ಲಿ ಯಾವುದಕ್ಕೂ ಕೊರತೆಯಾಗದಂತೆ, ಅಚ್ಚುಕಟ್ಟಾಗಿ ಮನೆ ನಿರ್ಮಿಸಿಕೊಟ್ಟು ಸಾರ್ಥಕತೆ ಮೆರೆದಿದ್ದಾರೆ. ಸರ್ಕಾರದಿಂದ ಆಗದ ಕೆಲಸವನ್ನು ಯುವಾ ಬ್ರಿಗೇಡ್ ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನ ತಂಡದ ಸದಸ್ಯರು ಮಾಡಿ ತೋರಿಸಿದ್ದಾರೆ. ಮಹಾ ಪ್ರವಾಹ-ಯುವಾ ಸಹಾಯ ಯೋಜನೆಯನ್ನ ಹಾಕಿಕೊಂಡು ಸಹಾಯದ ಹಸ್ತ ಚಾಚಿದ್ದಾರೆ.

smg yuva brigade 2

ನೆರೆಯಿಂದ ಸಂತ್ರಸ್ತಗೊಂಡರಿಗೆ ಸರಿಯಾಗಿ ಪರಿಹಾರ ಇನ್ನೂ ವಿತರಣೆ ಆಗಿಲ್ಲ. ಹೀಗಿರುವಾಗ ಸಿ.ಎಂ ಯಡಿಯೂರಪ್ಪ ಅವರ ತವರು ಜಿಲ್ಲೆಯಲ್ಲಿಯೇ ದಂಪತಿಗೆ ಮನೆ ಕಟ್ಟಿಸುವ ಮೂಲಕ ಯುವಾ ಬ್ರಿಗೇಡ್ ಮೆಚ್ಚುಗೆಗೆ ಪಾತ್ರವಾಗಿದೆ. ಇದನ್ನೂ ಓದಿ:ಪ್ರತಿನಿತ್ಯ 15 ನಿಮಿಷ ಫೋನಿನಲ್ಲಿ ಕನ್ನಡ ಕಲಿಯಿರಿ – ಯುವಾ ಬ್ರಿಗೇಡಿನಿಂದ ಕನ್ನಡ ಸುಗಂಧ

ರಾಜ್ಯದ ಹಲವಾರು ಜಿಲ್ಲೆಗಳಲ್ಲಿ ಈ ರೀತಿಯ ಮನೆ ನಿರ್ಮಿಸಿಕೊಡಲು ಯುವಾ ಬ್ರಿಗೇಡ್ ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನ ತಂಡದ ಪ್ಲ್ಯಾನ್ ರೂಪಿಸಿಕೊಂಡಿದ್ದೇವೆ. ಈಗಾಗಲೇ ಇದಕ್ಕೆ ಪಟ್ಟಿಯೂ ಕೂಡ ಸಿದ್ಧಪಡಿಸಿಕೊಂಡಿದ್ದೇವೆ ಎಂದು ಸಂಚಾಲಕ ಹರ್ಷ ತಿಳಿಸಿದ್ದಾರೆ.

smg yuva brigade 3

ಕಳೆದೆರೆಡು ತಿಂಗಳಿನಿಂದ ಮಳೆಗೆ ಬಿದ್ದಿದ್ದ ಗುಡಿಸಲು ಮುಂಭಾಗದಲ್ಲೇ ಇರುವ ದೇವಾಲಯದಲ್ಲಿ ಈ ವೃದ್ಧ ದಂಪತಿ ವಾಸವಾಗಿದ್ದು, ಅಲ್ಲಿಯೇ ಜೀವನದ ಬಂಡಿ ಸಾಗಿಸುತ್ತಿದ್ದಾರೆ. ನವೆಂಬರ್ 15ರ ಶುಕ್ರವಾರದಂದು ಈ ಮನೆಯ ಗೃಹಪ್ರವೇಶ ನಡೆಸಲು ಯುವಾ ಬ್ರಿಗೇಡ್ ತಂಡದ ಸದಸ್ಯರು ಉತ್ಸುಕರಾಗಿದ್ದು, ಅಂದು ಇದಕ್ಕೆಲ್ಲಾ ಬೆನ್ನೆಲುಬಾಗಿರುವ ಹಾಗೂ ಈ ಯೋಜನೆಯ ಸೂತ್ರದಾರರಾಗಿರುವ ಚಕ್ರವರ್ತಿ ಸೂಲಿಬೆಲೆ ಅವರಿಂದ ನೂತನ ಮನೆಯ ಬೀಗದ ಕೈಯನ್ನು ವೃದ್ಧ ದಂಪತಿ ಹಸ್ತಾಂತರಿಸುವುದಾಗಿ ಸದಸ್ಯರು ಹೇಳಿದ್ದಾರೆ.

smg yuva brigade 5

ವಿದ್ಯುತ್ ಸಂಪರ್ಕ ಕೂಡ ಇಲ್ಲದ ಗುಡಿಸಲಲ್ಲಿ ವಾಸವಾಗಿ ಅದನ್ನೂ ನೆರೆಯಿಂದ ಕಳೆದುಕೊಂಡಿದ್ದ ಅಜ್ಜ-ಅಜ್ಜಿಯ ನೂತನ ಮನೆಗೆ ವಿದ್ಯುತ್ ಸಂಪರ್ಕವನ್ನ ಕೂಡ ಕೊಡಿಸಲಾಗಿದೆ. ನಗರದ ಯುವಾ ಬ್ರಿಗೇಡ್ ಹಾಗೂ ಸೋದರಿ ನಿವೇದಿತಾ ಪ್ರತಿಷ್ಠಾನ ತಂಡದ ಸದಸ್ಯರ ಆಸಕ್ತಿಯಿಂದಾಗಿ ಇದೀಗ ತಮ್ಮ ಬಾಳ ಪಯಣದ ಇಳಿ ಸಂಜೆಯಲ್ಲಿರುವ ವೃದ್ಧ ದಂಪತಿ ಬೆಳಕು ಕಾಣುವಂತಾಗಿದೆ.

TAGGED:floodhouseoldage couplePublic TVshivamoggaSister Nivedita Foundation Teamyuva Brigadeನೆರೆಪಬ್ಲಿಕ್ ಟಿವಿಮನೆಯುವಾ ಬ್ರಿಗೇಡ್ವೃದ್ಧ ದಂಪತಿಶಿವಮೊಗ್ಗಸಹೋದರಿ ನಿವೇದಿತಾ ಪ್ರತಿಷ್ಠಾನ ತಂಡ
Share This Article
Facebook Whatsapp Whatsapp Telegram

Cinema news

Atlee
ಹೆಣ್ಣು ಮಗು ಜನಿಸಿದ ಸಂಭ್ರಮದಲ್ಲಿ ನಿರ್ದೇಶಕ ಅಟ್ಲೀ ದಂಪತಿ
Cinema Latest Top Stories
Deepika Padukone Ranveer Singh
2ನೇ ಮಗುವಿನ ನಿರೀಕ್ಷೆಯಲ್ಲಿ ದೀಪಿಕಾ ಪಡುಕೋಣೆ, ರಣವೀರ್‌ ಸಿಂಗ್‌ ದಂಪತಿ
Bollywood Cinema Latest Top Stories
darshan ex manager mallikarjun 2 1
ದರ್ಶನ್‌, ಧ್ರುವ ಸರ್ಜಾ ನಡುವೆ ಮನಸ್ತಾಪಕ್ಕೆ ಕಾರಣ ಯಾರು? – ಮಲ್ಲಿಕಾರ್ಜುನ್‌ ಹೇಳಿದ್ದೇನು?
Bengaluru City Cinema Latest Sandalwood Top Stories
darshan ex manager mallikarjun 2
ಕೇಸ್‌ ಒಂದ್ರಲ್ಲಿ ದರ್ಶನ್‌ ಸರ್‌ ಸಿಕ್ಕಾಕೊಂಡಾಗ ಬಹಳ ಬೇಜಾರಾಯ್ತು: ಮಾಜಿ ಮ್ಯಾನೇಜರ್‌ ಮಲ್ಲಿಕಾರ್ಜುನ್‌ ಮಾತು
Bengaluru City Cinema Latest Sandalwood Top Stories

You Might Also Like

Rajasthan Refinery Unit Fire
Latest

ನಾಳೆ ಪಿಎಂ ಮೋದಿ ಉದ್ಘಾಟಿಸಬೇಕಿದ್ದ 79,000 ಕೋಟಿ ಮೌಲ್ಯದ ರಿಫೈನರಿ ಘಟಕಕ್ಕೆ ಬೆಂಕಿ

Public TV
By Public TV
35 minutes ago
Private Plane Flying 30 Feet Above Ground Crashes Into Tree In Chhattisgarh
Latest

ಮರಕ್ಕೆ ಡಿಕ್ಕಿಯಾಗಿ ಖಾಸಗಿ ವಿಮಾನ ಪತನ

Public TV
By Public TV
1 hour ago
bjp flag
Bengaluru City

ಭ್ರಷ್ಟಾಚಾರವೇ ಕಾಂಗ್ರೆಸ್‌ನ ಅಸಲಿ ಗ್ಯಾರಂಟಿ – ಇಡಿ ದಾಳಿಗೆ ಬಿಜೆಪಿ ಟೀಕೆ

Public TV
By Public TV
1 hour ago
Sadhvi Satish Sail
Latest

ಮಗಳು ಬಿಸಿನೆಸ್ ಮಾಡಲಿ ಅಂತ ಸಿಎಂ, ಡಿಸಿಎಂ ಬಳಿ ಬುದ್ದಿ ಹೇಳಿಸಿದ್ದೆ: ‘ಫೆಮಿನಾ ಮಿಸ್‌ ಇಂಡಿಯಾ’ ಕಿರೀಟ ಗೆದ್ದ ಮಗಳ ಬಗ್ಗೆ ಸತೀಶ್‌ ಸೈಲ್‌ ಮಾತು

Public TV
By Public TV
2 hours ago
Doctor Ramesh who was supposed to marry his wifes sister tomorrow murdered Sirsi KHB Colony
Crime

ಇಂದು ಮದುವೆ ಆಗ್ಬೇಕಿದ್ದ ವೈದ್ಯನ ಹತ್ಯೆ ಕೇಸ್‌ – ಚಿನ್ನದ ಆಸೆಗೆ ಸ್ನೇಹಿತನಿಂದಲೇ ಮರ್ಡರ್‌

Public TV
By Public TV
2 hours ago
Mohammed Nalapad
Bengaluru City

ನಲಪಾಡ್ ಮನೆ ಮೇಲೆ ಇಡಿ ದಾಳಿಗೆ ಆ 10 ಲಕ್ಷ ಕಾರಣಾನಾ?

Public TV
By Public TV
2 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?