ಡಾ.ರಾಜ್ಕುಮಾರ್ (Rajkumar) ಕುಟುಂಬದ ಕುಡಿ ಯುವ ರಾಜ್ಕುಮಾರ್ (Yuva Rajkumar) ಸ್ಯಾಂಡಲ್ವುಡ್ಗೆ (Sandalwood) ಎಂಟ್ರಿ ಕೊಡಲು ವೇದಿಕೆ ಸಜ್ಜಾಗಿದೆ. (ಫೆ.3) ಶುಕ್ರವಾರ ಸಂಜೆ ಟೈಟಲ್ ರಿವೀಲ್ ಆಗುವ ಮುಂಚೆಯೇ ಶೇಷಾದ್ರಿಪುರಂನಲ್ಲಿರುವ ಸುಬ್ರಹ್ಮಣ್ಯ ಸ್ವಾಮಿಗೆ (Subramanya Temple) ಯುವ ಮತ್ತು ಚಿತ್ರತಂಡ ವಿಶೇಷ ಪೂಜೆ ಸಲ್ಲಿಸಿದ್ದಾರೆ.
ಪುನೀತ್ ರಾಜ್ಕುಮಾರ್ (Puneeth Rajkumar) ಅವರ ಮುಂದಿನ ಉತ್ತರಾಧಿಕಾರಿ ಯುವನ ಸಿನಿಮಾ ಎಂಟ್ರಿಗೆ ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಸಂತೋಷ್ ಆನಂದ್ ರಾಮ್- ಯುವ ಕಾಂಬಿನೇಷನ್ ಚಿತ್ರಕ್ಕೆ ಹೊಂಬಾಳೆ ಸಂಸ್ಥೆ ನಿರ್ಮಾಣ ಮಾಡ್ತಿದೆ. ಇದನ್ನೂ ಓದಿ: ಫಸ್ಟ್ ನೈಟ್ನ ಬೆಡ್ರೂಮ್ ಫೋಟೋ ಹಂಚಿಕೊಂಡ ನಟಿ ಸ್ವರಾ ಭಾಸ್ಕರ್
ಯುವ ರಾಜ್ಕುಮಾರ್ ಚೊಚ್ಚಲ ಸಿನಿಮಾಗೆ ಚಾಲನೆ ಸಿಗುವ ಮುನ್ನ ಶೇಷಾದ್ರಿಪುರಂನಲ್ಲಿರುವ ಸುಬ್ರಹ್ಮಣ್ಯ ಸ್ವಾಮಿಗೆ ವಿಶೇಷ ಪೂಜೆ ಸಲ್ಲಿಸಿದ್ದಾರೆ. ಈ ವೇಳೆ ಯುವ ಜೊತೆ ನಿರ್ದೇಶಕ ಸಂತೋಷ್ ಆನಂದ್ ರಾಮ್, ವಿಜಯ್ ಕಿರಗಂದೂರು ಸಾಥ್ ನೀಡಿದ್ದಾರೆ. ಬೆಂಗಳೂರಿನ ಖಾಸಗಿ ರೆಸಾರ್ಟ್ನಲ್ಲಿರುವ ಯುವ ನಟಿಸಲಿರುವ ಚೊಚ್ಚಲ ಚಿತ್ರಕ್ಕೆ ಮುಹೂರ್ತ ನೆರವೇರಲಿದೆ. ಇನ್ನೂ ಯುವ ನಟನೆಯ ಚೊಚ್ಚಲ ಸಿನಿಮಾಗೆ `ಜ್ವಾಲಾಮುಖಿ’ ಅಥವಾ `ಅಶ್ವಮೇಧ’ ಟೈಟಲ್ ಇಡಲಾಗುತ್ತಿದೆ ಎಂದು ಹೇಳಲಾಗುತ್ತಿದೆ. ಎಲ್ಲದಕ್ಕೂ ಸದ್ಯದಲ್ಲೇ ಉತ್ತರ ಸಿಗಲಿದೆ.