Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ‘ನನ್ನ ಮಗನ ಕೆರಿಯರ್ ಮುಗಿಸಿಬಿಟ್ಟೆ’
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Latest | ‘ನನ್ನ ಮಗನ ಕೆರಿಯರ್ ಮುಗಿಸಿಬಿಟ್ಟೆ’

Latest

‘ನನ್ನ ಮಗನ ಕೆರಿಯರ್ ಮುಗಿಸಿಬಿಟ್ಟೆ’

Public TV
Last updated: April 26, 2020 7:44 pm
Public TV
Share
3 Min Read
Yuvraj Singh Stuart Broad Father Chris Broad
SHARE

ನವದೆಹಲಿ: ‘ನನ್ನ ಮಗನ ವೃತ್ತಿ ಜೀವನವನ್ನೇ ಇಲ್ಲಿಗೆ ಮುಗಿಸಿಬಿಟ್ಟೆ’ ಅಂತ ಇಂಗ್ಲೆಂಡ್‍ನ ಮಾಜಿ ಆಟಗಾರ, ಮ್ಯಾಚ್ ರೆಫರಿ ಕ್ರಿಸ್ ಬ್ರಾಡ್ ನನ್ನ ವಿರುದ್ಧ ದೂರಿದ್ದರು ಎಂದು ಟೀಂ ಇಂಡಿಯಾ ಮಾಜಿ ಆಲ್‍ರೌಂಡರ್ ಯುವರಾಜ್ ಸಿಂಗ್ ನೆನೆದಿದ್ದಾರೆ.

ಯುವಿ ಸಂದರ್ಶನವೊಂದರಲ್ಲಿ ಈ ವಿಚಾರವನ್ನು ರಿವೀಲ್ ಮಾಡಿದ್ದಾರೆ. 2007ರ ಟಿ20 ವಿಶ್ವಕಪ್‍ನ ಟೂರ್ನಿಯಲ್ಲಿ ಇಂಗ್ಲೆಂಡ್ ಬೌಲರ್ ಸ್ಟುವರ್ಟ್ ಬ್ರಾಡ್ ಓವರಿನಲ್ಲಿ ಯುವರಾಜ್ ಸಿಂಗ್ ಬ್ಯಾಕ್ ಟು ಬ್ಯಾಕ್ ಆರು ಸಿಕ್ಸರ್ ಸಿಡಿಸಿ ಇತಿಹಾಸ ಸೃಷ್ಟಿಸಿದ್ದರು. ಟಿ20 ಮಾದರಿಯಲ್ಲಿ ಈ ಸಾಧನೆಯನ್ನು ಮಾಡಿದ ಮೊದಲ ಬ್ಯಾಟ್ಸ್‌ಮನ್‌ ಆಗಿದ್ದಾರೆ. ಅಂದು ನಡೆದ ಘಟನೆ ಬಳಿಕ ನಡೆದ ಆಸಕ್ತಿಕಾರ ಮಾಹಿತಿಯನ್ನು ಬಹಿರಂಗ ಪಡಿಸಿದ್ದಾರೆ.

Yuvraj Singh 6

ಅಂದು ಯುವಿ ಸಿಡಿಸಿದ ‘ಸಿಕ್ಸ‌ರ್‌ಗಳು’ ಸ್ಟುವರ್ಟ್ ಬ್ರಾಡ್ ಅವರ ವೃತ್ತಿಜೀವನವನ್ನು ಅಲ್ಲಿಗೆ ಕೊನೆಗೊಳಿಸಬಹುದು ಎಂಬ ಮಾತುಗಳು ಕೇಳಿ ಬಂದಿದ್ದವು. ಆದರೆ ಸ್ಟುವರ್ಟ್ ಅವರು ಉತ್ತಮ ಪ್ರದರ್ಶನ ನೀಡುವ ಮೂಲಕ ಟೀಕಾಕಾರರಿಗೆ ತಿರುಗೇಟು ನೀಡಿ, ತಂಡದಲ್ಲಿ ಉಳಿದರು. ಸದ್ಯ ಸ್ಟುವರ್ಟ್ ಬ್ರಾಡ್ ಇಂಗ್ಲೆಂಡ್‍ನ ಟೆಸ್ಟ್ ತಂಡದಲ್ಲಿ ಜೇಮ್ಸ್ ಆಂಡರ್ಸನ್ ಜೊತೆಗೆ ವೇಗದ ಬೌಲರ್ ಪಟ್ಟಿಯಲ್ಲಿದ್ದಾರೆ. ಅವರು 2012 ಮತ್ತು 2014ರ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ತಂಡದ ನಾಯಕತ್ವ ವಹಿಸಿದ್ದರು.

ಅಂದಿನ ಪಂದ್ಯವನ್ನು ನೆನೆದ ಯುವಿ, ”ಸ್ಟುವರ್ಟ್ ಬ್ರಾಡ್ ತಂದೆ, ಮ್ಯಾಚ್ ರೆಫರಿ ಕ್ರಿಸ್ ಬ್ರಾಡ್ ಅವರು ಪಂದ್ಯದ ಮರುದಿನ ನನ್ನ ಬಳಿಗೆ ಬಂದಿದ್ದರು. ಆಗ ಅವರು, ನೀವು ನನ್ನ ಮಗನ ವೃತ್ತಿಜೀವನವನ್ನು ಬಹುತೇಕ ಮುಗಿಸಿದ್ದೀರಿ. ಈಗ ನೀವು ಅವನ ಶರ್ಟ್ ಮೇಲೆ ಸಹಿ ಮಾಡಬೇಕಾಗಿದೆ ಎಂದು ಹೇಳಿದ್ದರು. ಹಾಗಾಗಿ ನಾನು ನನ್ನ ಜರ್ಸಿಯ ಮೇಲೆ ‘ಆಲ್ ದಿ ಬೆಸ್ಟ್’ ಎಂದು ಬರೆದು ಅವರಿಗೆ ಕೊಟ್ಟಿದ್ದೆ” ಎಂದರು.

Yuvraj Singh 6 sixes A

ಸ್ಟುವರ್ಟ್ ಬ್ರಾಡ್ ಇಂಗ್ಲೆಂಡ್ ಪರ ಆಡಿದ ಅತ್ಯುತ್ತಮ ವೇಗದ ಬೌಲರ್ ಗಳಲ್ಲಿ ಒಬ್ಬರಾಗಿದ್ದಾರೆ ಎಂದು ಯುವರಾಜ್ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ. 485 ಟೆಸ್ಟ್ ವಿಕೆಟ್‍ಗಳನ್ನು ಪಡೆದಿರುವ ಅವರು ಇಂಗ್ಲೆಂಡ್ ತಂಡದ ಪರ ಟೆಸ್ಟ್ ಕ್ರಿಕೆಟ್‍ನಲ್ಲಿ ಅತಿಹೆಚ್ಚು ವಿಕೆಟ್ ಕಬಳಿಸಿದ ಎರಡನೇ ಬೌಲರ್ ಆಗಿದ್ದಾರೆ. ಅವರು ಏಕದಿನ ಪಂದ್ಯಗಳಲ್ಲಿ 178 ವಿಕೆಟ್ ಮತ್ತು ಟಿ20ಯಲ್ಲಿ 65 ವಿಕೆಟ್ ಗಳಿಸಿದ್ದಾರೆ. ಬ್ರಾಡ್ 2017ರಿಂದ ವೈಟ್-ಬಾಲ್ ಕ್ರಿಕೆಟ್‍ನಿಂದ ದೂರ ಉಳಿದಿದ್ದಾರೆ.

ಅಂದಿನ ಪಂದ್ಯದಲ್ಲಿ ಏನಾಗಿತ್ತು?:
2007ರ ಸೆಪ್ಟೆಂಬರ್ 10ರಂದು ನಡೆದಿದ್ದ ಪಂದ್ಯದ ಇನ್ನಿಂಗ್ಸ್ ನ 17 ಓವರ್ ಎಸೆದ ಫ್ಲಿಂಟಾಫ್ ಬೌಲಿಂಗ್‍ನಲ್ಲಿ ಯುವಿ 2 ಬೌಂಡರಿ ಸಿಡಿಸಿದ್ದರು. ಆದರೆ ಓವರಿನ ಅಂತಿಮ ಎಸೆತದಲ್ಲಿ ನಾನ್ ಸ್ಟ್ರೈಕ್‍ನಲ್ಲಿದ್ದ ಯುವರಾಜ್ ಸಿಂಗ್ ಅವರನ್ನು ಫ್ಲಿಂಟಾಫ್ ಮಾತಿನ ಚಾಟಿ ಬೀಸಿ ಕೆರಳಿಸಿದ್ದರು. ಆನ್‍ಫೀಲ್ಡ್‌ನಲ್ಲೇ ಫ್ಲಿಂಟಾಫ್ ವಿರುದ್ಧ ತಿರುಗಿಬಿದ್ದಿದ್ದ ಯುವಿ, ಬ್ಯಾಟ್ ತೋರಿಸಿ ಮುನ್ನುಗ್ಗಿದ್ದರು. ಆದರೆ ಈ ವೇಳೆಗೆ ಇತರೇ ಆಟಗಾರರು, ಅಂಪೈರ್ ನಡುವೆ ಬಂದು ಇಬ್ಬರ ಜಗಳ ಬಿಡಿಸುವ ಕಾರ್ಯ ಮಾಡಿದರು.

stuart broad yuvraj singh

ಫ್ಲಿಂಟಾಫ್ ಮಾತಿನ ಚಾಟಿಯಿಂದ ಸಿಟ್ಟಿಗೆದ್ದ ಯುವಿ 18ನೇ ಓವರ್ ಎಸೆದ ಸ್ಟುವರ್ಟ್ ಬ್ರಾಡ್ ಬೌಲಿಂಗ್‍ನಲ್ಲಿ 6 ಸಿಕ್ಸರ್ ಸಿಡಿಸಿ ದಾಖಲೆ ಬರೆದಿದ್ದರು. ಅಂದು ತಮಗೆ 6 ಎಸೆತಗಳಲ್ಲಿ 6 ಸಿಕ್ಸರ್ ಸಿಡಿಸುವ ಯೋಚನೆ ಇರಲಿಲ್ಲ. ಆದರೆ ಫ್ಲಿಂಟಾಪ್ ತೋರಿದ ವರ್ತನೆಯಿಂದ ಕೋಪಗೊಂಡು ಎಲ್ಲಾ ಎಸೆತಗಳನ್ನು ಬೌಂಡರಿ ಗೆರೆದಾಡಿ ಹೊಡೆಯಲು ಯತ್ನಿಸಿದೆ. ಅಲ್ಲದೇ 6 ಸಿಕ್ಸರ್ ಸಿಡಿಸಿದ ಬಳಿಕ ಪಂದ್ಯದ ಹಲವು ಅಚ್ಚರಿಯ ಘಟನೆಗಳು ನಡೆದವು. ಆಸ್ಟ್ರೇಲಿಯಾ ವಿರುದ್ಧದ ಸೆಮಿಫೈನಲ್ ಪಂದ್ಯದಲ್ಲಿ 30 ಎಸೆತಗಳಲ್ಲಿ 70 ರನ್ ಸಿಡಿಸಿದ ಬಳಿಕ ವಿಕೆಟ್ ಕೀಪರ್ ಆಡಮ್ ಗಿಲ್‍ಕ್ರಿಸ್ಟ್ ಬ್ಯಾಟ್ ಕುರಿತು ಸಂಶಯ ವ್ಯಕ್ತಪಡಿಸಿದ್ದರು ಎಂದು ಯುವಿ ಈ ಹಿಂದೆ ಹೇಳಿದ್ದರು.

TAGGED:6 sixesChris BroadenglandPublic TVStuart BroadYuvraj Singhಇಂಗ್ಲೆಂಡ್ಕ್ರಿಸ್ ಬ್ರಾಡ್ಪಬ್ಲಿಕ್ ಟಿವಿಫ್ಲಿಂಟಾಫ್ಯುವರಾಜ್ ಸಿಂಗ್ಸ್ಟುವರ್ಟ್ ಬ್ರಾಡ್
Share This Article
Facebook Whatsapp Whatsapp Telegram

Cinema news

Ranveer Singh Rishab Shetty Kantara
ದೈವನಿಂದನೆ ಕೇಸಲ್ಲಿ ನಟ ರಣವೀರ್ ಸಿಂಗ್‌ಗೆ ನೋಟಿಸ್
Bollywood Cinema Latest Top Stories
rishab shetty anjanadri hills
ಅಂಜನಾದ್ರಿ ಬೆಟ್ಟಕ್ಕೆ ನಟ ರಿಷಬ್‌ ಶೆಟ್ಟಿ ದಂಪತಿ ಭೇಟಿ‌
Cinema Koppal Latest Sandalwood Top Stories
Kavya Gowfa 2
ಚಪ್ಪಲಿ ಎಸೆದಿದ್ದು, ಹಲ್ಲೆ ಮಾಡಿದ್ದು ಓರಗಿತ್ತಿ ಪ್ರೇಮಾ – ಸಾಕ್ಷ್ಯ ಬಯಲು ಮಾಡಿದ ನಟಿ ಕಾವ್ಯ ಗೌಡ
Cinema Latest Sandalwood Top Stories
Toxic Teaser
`Toxic’ನ ರಣರೋಚಕ ಟೀಸರ್ ರಿಲೀಸ್ – ಡಬಲ್‌ ಶೇಡ್‌ನಲ್ಲಿ ಕಾಣಿಸಿಕೊಂಡ ಯಶ್‌
Cinema Latest Main Post Sandalwood

You Might Also Like

HC Balakrishna
Districts

ಡಿಕೆಶಿ ಬಿಜೆಪಿ ಜೊತೆ ರಾಜಿ ಆಗಿದ್ರೆ ಎಲ್ಲೋ ಇರ್ತಿದ್ರು – ಹೆಚ್‌.ಸಿ ಬಾಲಕೃಷ್ಣ

Public TV
By Public TV
6 minutes ago
Bagalkote stone pelting Case 7 innocent people arrested Muslims appeal for their release
Bagalkot

ಬಾಗಲಕೋಟೆ ಕಲ್ಲುತೂರಾಟ| ಬಂಧನಕ್ಕೆ ಒಳಗಾದ 7 ಮಂದಿ ಅಮಾಯಕರು: ಬಿಡುಗಡೆ ಮಾಡುವಂತೆ ಮುಸ್ಲಿಮರ ಮನವಿ

Public TV
By Public TV
6 minutes ago
Robbery 1
Bengaluru City

ಬೆಂಗಳೂರಲ್ಲಿ ಬ್ಯಾಂಕ್ ಎಟಿಎಂ ದರೋಡೆಗೆ ಯತ್ನ – ನೇಪಾಳಿ ಪ್ರಜೆ ಅರೆಸ್ಟ್!

Public TV
By Public TV
34 minutes ago
Kumar Maharaj Swamiji
Districts

ಚಂದ್ರು ಲಮಾಣಿ ಲಂಚ ಪ್ರಕರಣ – ʻಷಡ್ಯಂತ್ರʼ ಆಡಿಯೋ ಬಗ್ಗೆ ಸ್ವಾಮೀಜಿ ಸ್ಪಷ್ಟನೆ

Public TV
By Public TV
1 hour ago
H D Kumaraswamy
Bengaluru City

ನಿಮಗೆ ಸಿಕ್ಕಿರುವ ಅಧಿಕಾರ, ಸಾಮಾಜಿಕ ನ್ಯಾಯಕಾರ ಪೋಷಾಕು ಎಲ್ಲವೂ ದೇವೇಗೌಡರ ದೇಣಿಗೆ: ಸಿಎಂಗೆ ಹೆಚ್‌ಡಿಕೆ ತಿರುಗೇಟು

Public TV
By Public TV
1 hour ago
Will Jacks
Cricket

ತವರಿನಲ್ಲೇ ಲಂಕಾ ದಹನ – ಇಂಗ್ಲೆಂಡ್‌ಗೆ ʻವಿಲ್‌ʼ ಪವರ್‌, 51 ರನ್‌ಗಳ ಭರ್ಜರಿ ಜಯ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?