Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಡ್ಡದಾರಿಯಲ್ಲಿ ನಡೆಯುವ ಬದಲು ಮೌಲ್ಯಗಳಿಗೆ ಬದ್ಧನಾಗಿರುತ್ತೇನೆ – ಡಿವೋರ್ಸ್‌ ವದಂತಿ ಬಗ್ಗೆ ಚಾಹಲ್‌ ಫಸ್ಟ್‌ ರಿಯಾಕ್ಷನ್‌
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Cinema | ಅಡ್ಡದಾರಿಯಲ್ಲಿ ನಡೆಯುವ ಬದಲು ಮೌಲ್ಯಗಳಿಗೆ ಬದ್ಧನಾಗಿರುತ್ತೇನೆ – ಡಿವೋರ್ಸ್‌ ವದಂತಿ ಬಗ್ಗೆ ಚಾಹಲ್‌ ಫಸ್ಟ್‌ ರಿಯಾಕ್ಷನ್‌

Cinema

ಅಡ್ಡದಾರಿಯಲ್ಲಿ ನಡೆಯುವ ಬದಲು ಮೌಲ್ಯಗಳಿಗೆ ಬದ್ಧನಾಗಿರುತ್ತೇನೆ – ಡಿವೋರ್ಸ್‌ ವದಂತಿ ಬಗ್ಗೆ ಚಾಹಲ್‌ ಫಸ್ಟ್‌ ರಿಯಾಕ್ಷನ್‌

Public TV
Last updated: January 10, 2025 12:48 pm
Public TV
Share
2 Min Read
Dhanashree Verma 1
SHARE

‌ಮುಂಬೈ: ಟೀಂ ಇಂಡಿಯಾದ ಲೆಗ್‌ ಸ್ಪಿನ್ನರ್‌ ಯಜುವೇಂದ್ರ ಚಾಹಲ್‌ (Yuzvendra Chahal) ಅವರು ಪತ್ನಿ ಧನಶ್ರೀ ವರ್ಮಾಗೆ (Dhanashree Verma) ಡಿವೋರ್ಸ್‌ ಕೊಡಲಿದ್ದಾರೆ ಎಂಬ ವದಂತಿ ಬಗ್ಗೆ ಧನಶ್ರೀ ವರ್ಮಾ ಅವರು ಪೋಸ್ಟ್‌ ಹಂಚಿಕೊಂಡ ಬೆನ್ನಲ್ಲೇ ಪತಿ ಚಾಹಲ್‌ ಸಹ ಮೌನ ಮುರಿದಿದ್ದಾರೆ.

ತಮ್ಮ ಇನ್‌ಸ್ಟಾಗ್ರಾಮ್‌ನಲ್ಲಿ ಪೋಸ್ಟ್‌ವೊಂದನ್ನು ಹಂಚಿಕೊಂಡಿರುವ ಚಾಹಲ್‌ ಊಹಾಪೋಹ ಹರಡದಂತೆ ಮನವಿ ಮಾಡಿದ್ದಾರೆ. ಇದನ್ನೂ ಓದಿ: ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ – ಡಿವೋರ್ಸ್‌ ವದಂತಿ ಬೆನ್ನಲ್ಲೇ ಮೌನ ಮುರಿದ ಧನಶ್ರೀ

Dhanashree Verma

ಚಾಹಲ್‌ ಇನ್‌ಸ್ಟಾದಲ್ಲಿ ಏನಿದೆ?
ನನ್ನ ಎಲ್ಲಾ ಅಭಿಮಾನಿಗಳ ಅಚಲ ಪ್ರೀತಿ ಮತ್ತು ಬೆಂಬಲಕ್ಕಾಗಿ ನಾನು ಅವರಿಗೆ ಕೃತಜ್ಞನಾಗಿದ್ದೇನೆ. ಅಭಿಮಾನಿಗಳ ಬೆಂಬಲ ಇಲ್ಲದೇ ಇದ್ದಿದ್ದರೆ ನಾನು ಇಲ್ಲಿಯವರೆಗೆ ಬರುತ್ತಿರಲಿಲ್ಲ. ಆದ್ರೆ ಪ್ರಯಾಣ ಇಲ್ಲಿಗೇ ಮುಗಿಯುವುದಿಲ್ಲ. ಒಬ್ಬ ಕ್ರೀಡಾಪಟುವಾಗಿ ಇನ್ನೂ ನನ್ನ ದೇಶ, ನನ್ನ ತಂಡ ಹಾಗೂ ನನ್ನ ಎಲ್ಲ ಅಭಿಮಾನಿಗಳಿಗಾಗಿ ಅದ್ಭುತ ಓವರ್‌ಗಳು ಬಾಕಿ ಉಳಿದಿವೆ. ಆದ್ರೆ ಇತ್ತೀಚೆಗೆ ನಡೆಯುತ್ತಿರುವ ಘಟನೆಯನ್ನು ನಾನು ಅರ್ಥಮಾಡಿಕೊಂಡಿದ್ದೇನೆ. ಅದರಲ್ಲೂ ನನ್ನ ವೈಯಕ್ತಿಕ ಜೀವನದ ಬಗ್ಗೆ ಜಾಲತಾಣದಲ್ಲಿ ಕಾಮೆಂಟ್‌ಗಳು ಹರಿದಾಡುತ್ತಿವೆ. ಅದರಲ್ಲಿ ಸತ್ಯವಾಗಿರಬಹುದಾದ ಮತ್ತು ಸತ್ಯವಲ್ಲದ ವಿಷಯಗಳ ವದಂತಿ ಹರಿದಾಡುತ್ತಿರುವುದನ್ನು ನಾನು ಗಮನಿಸಿದ್ದೇನೆ. ಇದನ್ನೂ ಓದಿ:  ಕೊಡಗಿನಲ್ಲಿ ತಲೆ ಎತ್ತಲಿದೆ ಅಂತಾರಾಷ್ಟ್ರೀಯ ಕ್ರಿಕೆಟ್ ಸ್ಟೇಡಿಯಂ

Dhanashree Verma 2 1

ನಾನು ಒಬ್ಬ ಮಗ, ಸಹೋದರ ಹಾಗೂ ಸ್ನೇಹಿತನಾಗಿ ನಿಮ್ಮಲ್ಲಿ ವಿನಂತಿಸಿಕೊಳ್ಳುತ್ತೇನೆ. ಯಾರೂ ಊಹಾಪೋಹಗಳಲ್ಲಿ ತೊಡಗಬೇಡಿ. ಇಂತಹ ಊಹಾಪೋಹಳಿಂದ ನನಗೆ ಮತ್ತು ನನ್ನ ಕುಟುಂಬಕ್ಕೆ ತುಂಬಾನೆ ನೋವಾಗಿದೆ. ನನ್ನ ಕುಟುಂಬ ಎಲ್ಲರಿಗೂ ಒಳ್ಳೆಯದನ್ನೇ ಬಯಸಲು ಕಲಿಸಿದೆ, ಕಠಿಣ ಪರಿಶ್ರಮದಿಂದ ಯಶಸ್ಸು ಗಳಿಸುವುದನ್ನೇ ಕಲಿಸಿದೆ. ಹಾಗಾಗಿ ಜೀವನದಲ್ಲಿ ಅಡ್ಡದಾರಿಯಲ್ಲಿ ಸಾಗುವ ಬದಲು ನಾನು ನನ್ನ ಮೌಲ್ಯಗಳಿಗೆ ಬದ್ಧನಾಗಿರುತ್ತೇನೆ. ದೇವರ ಆಶೀರ್ವಾದದೊಂದಿಗೆ ನಿಮ್ಮೆಲ್ಲರ ಪ್ರೀತಿ ಮತ್ತು ಬೆಂಬಲ ಪಡೆಯಲು ನಾನು ಶಾಶ್ವತವಾಗಿ ಶ್ರಮಿಸುತ್ತೇನೆ ಎಂದು ಬರೆದುಕೊಂಡಿದ್ದಾರೆ.

Dhanashree Verma 2

ಧನಶ್ರೀ ವರ್ಮಾ ಹೇಳಿದ್ದೇನು?
ನಾನು, ನನ್ನ ಕುಟುಂಬದ ಸದಸ್ಯರು ಕಳೆದ ಕೆಲ ದಿನಗಳಿಂದ ಕಠಿಣ ಪರಿಸ್ಥಿತಿ ಎದುರಿಸುತ್ತಿದ್ದೇವೆ. ಕೆಲವರು ಸತ್ಯ ತಿಳಿಯದೇ ಸುಳ್ಳು ಸುಳ್ಳನ್ನೇ ಬರೆಯುತ್ತಿದ್ದಾರೆ. ನನ್ನ ಖ್ಯಾತಿಗೆ ಕಳಂಕ ತರಲು ಆಧಾರರಹಿತ ಬರವಣಿಗೆ, ಸತ್ಯ-ಪರಿಶೋಧವಿಲ್ಲದ ಬರಹಗಳು ಮತ್ತು ದ್ವೇಷ ಹರಡುವ ಟ್ರೋಲ್‌ಗಳನ್ನು ಮಾಡುತ್ತಿದ್ದಾರೆ. ಹಲವು ವರ್ಷಗಳ ಕಾಲ ಶ್ರಮಿಸಿದ ನಂತರವೇ ನಾನು ಈ ಮಟ್ಟಕ್ಕೆ ಬೆಳೆದಿದ್ದೇನೆ. ನಾನು ಮೌನವಾಗಿದ್ದ ಮಾತ್ರಕ್ಕೆ, ಅದು ನನ್ನ ದೌರ್ಬಲ್ಯ ಎಂದು ಭಾವಿಸಬೇಡಿ ಎಂದಿದ್ದರು.

Dhanashree Verma 1

ಮುಂದುವರಿದು… ಇತರರಿಗೆ ಸಹಾನುಭೂತಿ ತೋರಿಸಲು ಧೈರ್ಯ ಬೇಕು. ನೈಜ ಪರಿಸ್ಥಿತಿ ಗಮನದಲ್ಲಿಟ್ಟುಕೊಂಡು ಮೌಲ್ಯಗಳೊಂದಿಗೆ ಮುಂದುವರಿಯುವುದರಲ್ಲಿ ನಾನು ನಂಬಿಕೆ ಇಡುತ್ತೇನೆ. ಇಲ್ಲಿ ಸಮರ್ಥಿಸಿಕೊಳ್ಳುವ ಅಗತ್ಯವಿಲ್ಲ. ನಾನು ನನ್ನ ಸತ್ಯದ ಮೇಲೆ ಕೇಂದ್ರೀಕರಿಸಲು ಮತ್ತು ನನ್ನ ಮೌಲ್ಯಗಳನ್ನು ಹಿಡಿದಿಟ್ಟುಕೊಂಡು ಮುಂದುವರಿಯುವುದನ್ನು ಆಯ್ಕೆ ಮಾಡುತ್ತೇನೆ. ಯಾವುದೇ ಸಾಕ್ಷ್ಯಗಳಿಲ್ಲಿದ್ರೂ ಸತ್ಯವು ಅದರ ಸ್ಥಾನದಲ್ಲಿ ದೃಢವಾಗಿ ನಿಂತಿದೆ. ಓಂ ನಮಃ ಶಿವಾಯ ಎಂದು ತಮ್ಮ ಇನ್‌ಸ್ಟಾಗ್ರಾಮ್‌ ಸ್ಟೋರಿಯಲ್ಲಿ ಹಂಚಿಕೊಂಡಿದ್ದರು.

Dhanashree Verma

ಸದ್ಯ ಚಾಹಲ್‌ ಹಾಗೂ ಧನಶ್ರೀ ಇಬ್ಬರೂ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದಾರೆಯೇ ಹೊರತು, ವೈವಾಹಿಕ ಜೀವನದಲ್ಲಿ ಜೊತೆಗೆ ಮುಂದುವರಿಯುವ ಬಗ್ಗೆ ಸ್ಪಷ್ಟನೆ ನೀಡಿಲ್ಲ. ಹಾಗಾಗಿ ಚಹಲ್‌-ಧನಶ್ರೀ ಅವರ ಈ ಪೋಸ್ಟ್‌ ಮತ್ತಷ್ಟು ಚರ್ಚೆಗಳನ್ನು ಹುಟ್ಟುಹಾಕಿದೆ.

TAGGED:Dhanashree VermaDivorce RumoursmumbaiYuzvendra Chahalಟೀಂ ಇಂಡಿಯಾಡಿವೋರ್ಸ್ಧನಶ್ರೀ ವರ್ಮಾಯಜುವೇಂದ್ರ ಚಾಹಲ್
Share This Article
Facebook Whatsapp Whatsapp Telegram

Cinema news

Rashmika Mandanna Vijay Devarakonda
ಫೆ.2 ಕ್ಕೆ ರಶ್ಮಿಕಾ-ವಿಜಯ್ ಮದುವೆ? ಫೇಕ್ ನ್ಯೂಸ್ ಶುರುವಾಗಿದ್ದು ಎಲ್ಲಿಂದ?
Cinema Latest Top Stories
Actress Jayamala
ಫಿಲ್ಮ್ ಚೇಂಬರ್ ನೂತನ ಅಧ್ಯಕ್ಷೆಯಾಗಿ ಹಿರಿಯ ನಟಿ ಜಯಮಾಲಾ ಪದಗ್ರಹಣ
Cinema Latest Sandalwood Top Stories
Pushpa Arunkumar
ಸೈಟ್‌ ವಿಚಾರಕ್ಕೆ ಜಟಾಪಟಿ – ಕೆಡವಿದ್ದ ಕಾಂಪೌಂಡ್‌ ಕಟ್ಟಿಸಲು ಮುಂದಾದ ಯಶ್‌ ತಾಯಿ
Cinema Districts Hassan Karnataka Latest Sandalwood States Top Stories
Ram Charan
ಅವಳಿ ಮಕ್ಕಳಿಗೆ ಜನ್ಮ ನೀಡಿದ ರಾಮ್‌ಚರಣ್ ಪತ್ನಿ ಉಪಾಸನಾ
Bollywood Cinema Latest Top Stories

You Might Also Like

Budget 2026 1 1
Latest

ವಿಕಸಿತ ಭಾರತಕ್ಕೆ ಕೇಂದ್ರದ ಯುವಶಕ್ತಿ ಬಜೆಟ್ – ಜೀರಾಮ್‌ಜೀ ಯೋಜನೆಗೆ 95,692 ಕೋಟಿ ಮೀಸಲು; ಹಿಂದಿಗಿಂತಲೂ ಹೆಚ್ಚು!

Public TV
By Public TV
6 hours ago
Hassan Car Accident
Crime

ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಕಾರು ಡಿಕ್ಕಿ – ಓರ್ವ ಸಾವು, ಇಬ್ಬರು ಗಂಭೀರ

Public TV
By Public TV
6 hours ago
Ind vs Pak U19 1
Cricket

U19 World Cup | ಭಾರತಕ್ಕೆ 58 ರನ್‌ಗಳ ಭರ್ಜರಿ ಜಯ – ಮೈದಾನದಲ್ಲೇ ಕಣ್ಣೀರಿಟ್ಟ ಪಾಕ್‌ ಕ್ರಿಕೆಟಿಗ

Public TV
By Public TV
6 hours ago
India vs Pakistan 1
Cricket

Boycott | ವಿಶ್ವಕಪ್‌ ಟೂರ್ನಿ ಆಡ್ತೀವಿ, ಭಾರತದ ವಿರುದ್ಧ ಆಡಲ್ಲ – ಪಾಕಿಸ್ತಾನ ಅಚ್ಚರಿ ನಿರ್ಧಾರ

Public TV
By Public TV
7 hours ago
Chaluvarayaswamy
Districts

ಕೃಷಿಯಾಧಾರಿತ ಕರ್ನಾಟಕಕ್ಕೆ ಕೇಂದ್ರ ಬಜೆಟ್‌ನಲ್ಲಿಲ್ಲ ಒತ್ತು: ಚಲುವರಾಯಸ್ವಾಮಿ

Public TV
By Public TV
7 hours ago
CJ Roy 6
Bengaluru City

ಬೆಲ್ಜಿಯಮ್ ದೇಶದ ಪಿಸ್ತೂಲ್‌ನಿಂದ ಸಿ.ಜೆ ರಾಯ್ ಶೂಟೌಟ್

Public TV
By Public TV
8 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?