Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಅಲ್ಪಸಂಖ್ಯಾತ ನಿಗಮದಲ್ಲಿ ಮಧ್ಯವರ್ತಿಗಳಿಗೆ ಬ್ರೇಕ್ ಹಾಕಲು ಜಮೀರ್ ಸೂಚನೆ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಅಲ್ಪಸಂಖ್ಯಾತ ನಿಗಮದಲ್ಲಿ ಮಧ್ಯವರ್ತಿಗಳಿಗೆ ಬ್ರೇಕ್ ಹಾಕಲು ಜಮೀರ್ ಸೂಚನೆ

Bengaluru City

ಅಲ್ಪಸಂಖ್ಯಾತ ನಿಗಮದಲ್ಲಿ ಮಧ್ಯವರ್ತಿಗಳಿಗೆ ಬ್ರೇಕ್ ಹಾಕಲು ಜಮೀರ್ ಸೂಚನೆ

Public TV
Last updated: June 13, 2023 10:25 pm
Public TV
Share
3 Min Read
Zameer Ahmed
SHARE

– ಯೋಜನೆಗಳ ಬಗ್ಗೆ ಪ್ರಚಾರ ನೀಡಿ ಪಾರದರ್ಶಕತೆ ಕಾಯ್ದುಕೊಳ್ಳಲು ನಿರ್ದೇಶನ

ಬೆಂಗಳೂರು: ಅಲ್ಪಸಂಖ್ಯಾತರ ಅಭಿವೃದ್ಧಿ ನಿಗಮದಲ್ಲಿ ಮಧ್ಯವರ್ತಿಗಳ ಹಾವಳಿ ತಪ್ಪಿಸಲು ನಿಗಮದ ಯೋಜನೆಗಳ ಬಗ್ಗೆ ವ್ಯಾಪಕ ಪ್ರಚಾರ ನೀಡಿ ಫಲಾನುಭವಿಗಳ ಆಯ್ಕೆ ಮಾಡುವಂತೆ ಅಧಿಕಾರಿಗಳಿಗೆ ಸಚಿವ ಜಮೀರ್ ಅಹ್ಮದ್ (Zameer Ahmed) ಸೂಚನೆ ನೀಡಿದ್ದಾರೆ.

ನಗರದ ನಿಗಮದ ಸಭಾಂಗಣದಲ್ಲಿ ಪ್ರಗತಿ ಪರಿಶೀಲನೆ ನಡೆಸಿದ ಅವರು, ನಿಗಮದ ಯೋಜನೆಗಳ ಫಲಾನುಭವಿಗಳ ಆಯ್ಕೆ ಮಾಡುವಾಗ ಪಾರದರ್ಶಕ ವ್ಯವಸ್ಥೆ ಅಳವಡಿಸಿಕೊಳ್ಳಬೇಕು. ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದಲ್ಲಿ ಹೆಸರಿಗೆ ಮಾತ್ರ ಯೋಜನೆಗಳು ಇರಬಾರದು. ರಾಜ್ಯದ ಎಲ್ಲೆಡೆ ಪ್ರಚಾರಪಡಿಸಿ ಪರಿಣಾಮಕಾರಿಯಾಗಿ ಜಾರಿಯಾಗಬೇಕು ಎಂದು ತಾಕೀತು ಮಾಡಿದರು. ಇದನ್ನೂ ಓದಿ: ಲಿಂಗಾಯತ ಅವಹೇಳನ ಕೇಸಲ್ಲಿ ಸಿದ್ದರಾಮಯ್ಯಗೆ ರಿಲೀಫ್

ಅಲ್ಪಸಂಖ್ಯಾತ ಇಲಾಖೆ (Minority Welfare) ಹಾಗೂ ಅಭಿವೃದ್ಧಿ ನಿಗಮದಲ್ಲಿ ಲಭ್ಯ ಇರುವ ಯೋಜನೆಗಳ ಬಗ್ಗೆ ಸಮುದಾಯಕ್ಕೆ ಮಾಹಿತಿ ನೀಡಲು ಬೃಹತ್ ಮಟ್ಟದ ಪ್ರಚಾರ ಅಭಿಯಾನ ಆರಂಭಿಸಬೇಕು. ನಿಗಮದ ವತಿಯಿಂದ ನೀಡಲಾಗುವ ಟ್ಯಾಕ್ಸಿ, ಆಟೋ, ಸರಕು ಸಾಗಣೆ ವಾಹನ ಸಾಲ ಯೋಜನೆಗಳಲ್ಲಿ ಫಲಾನುಭವಿಗಳಿಂದ 10% ರಷ್ಟು ವಂತಿಗೆ ಪಡೆಯುವುದು ಕಡ್ಡಾಯಗೊಳಿಸಬೇಕು. ನಿಗಮವೇ ಬ್ಯಾಂಕುಗಳ ಜೊತೆಯಲ್ಲಿ ಸಮನ್ವಯ ಸಾಧಿಸಬೇಕು. ನಮ್ಮ ಮೂಲಕವೇ ಏಕ ಗವಾಕ್ಷಿಯ 6ರ ಅಡಿ ಸಾಲ ಸೌಲಭ್ಯ ಸಿಗುವಂತೆ ಮಾಡಬೇಕು ಎಂದು ಸೂಚಿಸಿದರು.

ಅಲ್ಪಸಂಖ್ಯಾತ ಅಭಿವೃದ್ಧಿ ನಿಗಮದ ಸಾಲ ವಸೂಲಾತಿ ಪ್ರಮಾಣ 15% ರಷ್ಟು ಇರುವ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಈ ವರ್ಷ 50% ರಷ್ಟು ವಸೂಲಾತಿ ಆಗಬೇಕು. 760 ಕೋಟಿ ರೂ. ಶಿಕ್ಷಣ ಸಾಲ ವಸೂಲಾತಿಗೆ ಬಾಕಿ ಇದ್ದು ಒಂದು ಬಾರಿಗೆ ಇತ್ಯರ್ಥ ಆಗುವಂತೆ ಯೋಜನೆ ಜಾರಿಗೊಳಿಸಬೇಕು. ಬಡ್ಡಿ ಮನ್ನಾ ಮಾಡಿ ಸಾಲ ವಸೂಲಿ ಮಾಡುವಂತೆ ತಿಳಿಸಿದರು.

Zameer Ahmed 1

ಅಲ್ಪಸಂಖ್ಯಾತ ಸಮುದಾಯದ ಮಹಿಳೆಯರು ಹೊಸ ಉದ್ಯಮಗಳನ್ನು ಮಾಡಲು ಮುಂದಾದರೆ ಸಬ್ಸಿಡಿ ಸಹಿತ ಹಣಕಾಸು ನೆರವು ಕೊಡುವ ಯೋಜನೆ ಹೆಚ್ಚು ಮಂದಿಗೆ ತಲುಪುವಂತೆ ಮಾಡಬೇಕು. ಕೋಮುಗಲಭೆಯಿಂದ ಸಂತ್ರಸ್ತರಾಗುವ ಕುಟುಂಬಗಳಿಗೆ ಪುನರ್ ವಸತಿ ಕಲ್ಪಿಸುವ ಮನೆಯ ಯೋಜನೆ ಅನುದಾನ ಬಳಕೆ ಮಾಡಬೇಕು. ಅಭಿವೃದ್ಧಿ ನಿಗಮದ ವತಿಯಿಂದ ಬಡವರು ಮನೆ ನಿರ್ಮಿಸಿಕೊಳ್ಳಲು ಕೊಳೆಗೇರಿ ಮಂಡಳಿಗೆ ನೀಡಿರುವ 31 ಕೋಟಿ ರೂ. ಎಷ್ಟರ ಮಟ್ಟಿಗೆ ಪ್ರಯೋಜನವಾಗಿದೆ ಎಂಬುದರ ಕುರಿತು ಪ್ರಗತಿಯ ವಿವರ ನೀಡುವಂತೆ ಸೂಚಿಸಿದರು. ಅಲ್ಲದೇ ಹೊಸ ಪ್ರಸ್ತಾವನೆ ಸಿದ್ಧಪಡಿಸುವಂತೆ ನಿರ್ದೇಶನ ನೀಡಿದರು.

ವೃತ್ತಿಪರ ಕೋರ್ಸ್ ವ್ಯಾಸಂಗ ಮಾಡುವ ಅಲ್ಪಸಂಖ್ಯಾತ ಸಮುದಾಯದ 6500 ವಿದ್ಯಾರ್ಥಿಗಳಿಗೆ 10 ಕೋಟಿ ರೂ. ಸಾಲ ನೀಡುವ ಅರಿವು ಯೋಜನೆಯ ಚೆಕ್‍ನ್ನು ಪರೀಕ್ಷಾ ಪ್ರಾಧಿಕಾರಕ್ಕೆ ಹಸ್ತಾಂತರಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಸ್ಥಗಿತಗೊಂಡಿದ್ದ ವಿದೇಶದಲ್ಲಿ ವ್ಯಾಸಂಗ ಮಾಡುವ ವಿದ್ಯಾರ್ಥಿಗಳಿಗೆ ನೆರವು ನೀಡುವ 10 ಕೋಟಿ ರೂ. ಯೋಜನೆ ಹಾಗೂ 5 ಲಕ್ಷ ರೂ. ನಿಂದ 20 ಲಕ್ಷ ರೂ. ವರೆಗೆ ಸ್ವ ಉದ್ದಿಮೆ ಸ್ಥಾಪಿಸಲು ನೀಡುವ ನೇರ ಸಾಲ ಯೋಜನೆಗೂ ಚಾಲನೆ ನೀಡಿದರು.

ಅಲ್ಲದೇ 12 ಟ್ಯಾಕ್ಸಿ, 12 ಆಟೋ, 4 ಗೂಡ್ಸ್ ಆಟೋ ಗಳನ್ನು ಫಲಾನುಭವಿಗಳಿಗೆ ಹಸ್ತಾಂತರ ಮಾಡಿದರು. ಸಲ್ಮಾನ್ ಎಂಬ ಫಲಾನುಭವಿ, ಈ ಮುಂಚೆ ಬಾಡಿಗೆ ಆಟೋ ಓಡಿಸಿ ಜೀವನ ಸಾಗಿಸುತಿದ್ದೆ. ಇದೀಗ ನಿಗಮ ನನ್ನ ನೆರವಿಗೆ ಬಂದಿದ್ದು 20 ಸಾವಿರ ರೂ. ಪಡೆದು 9.20 ಲಕ್ಷ ರೂ. ಮೌಲ್ಯದ ಟ್ಯಾಕ್ಸಿ ಖರೀದಿಗೆ 2.50 ಲಕ್ಷ ರೂ. ಸಬ್ಸಿಡಿ ನೀಡಿದೆ. ಇದರಿಂದ ನನ್ನ ಬದುಕಿನ ಹಾದಿ ಬದಲಾಗಿದೆ ಎಂದು ಸಂತಸ ವ್ಯಕ್ತ ಪಡಿಸಿದರು. ಮತ್ತೊಬ್ಬ ಫಲಾನುಭವಿ ಮಾರ್ವಿನ್, 3.65 ಲಕ್ಷ ರೂ. ಮೊತ್ತದ ಆಟೋ 1 ಲಕ್ಷ ರೂ. ಸಬ್ಸಿಡಿಯೊಂದಿಗೆ ಬಂದಿದೆ. ನನಗೆ ಖುಷಿ ಆಗಿದೆ. ಬದುಕು ಕಟ್ಟಿಕೊಳ್ಳುವಂತಾಗಿದೆ ಎಂದರು.

ವಖ್ಫ್ (Wakf Board) ಆಸ್ತಿ ರಕ್ಷಣೆಗೆ ಕಾರ್ಯಪಡೆ ರಚಿಸಿ ಎಲ್ಲಾ ಆಸ್ತಿಗಳಿಗೆ ಕಾಪೌಂಡ್ ಹಾಕಲು ಕ್ರಮ ಕೈಗೊಳ್ಳಲಾಗುವುದು. ವಕ್ಫ್ ಆಸ್ತಿ ಸಂರಕ್ಷಣೆ ಹಾಗೂ ಸ್ಥಳೀಯ ಮಟ್ಟದಲ್ಲೇ ಕುಂದು ಕೊರತೆ ಪರಿಹಾರಕ್ಕೆ ವಿಭಾಗೀಯ ಮಟ್ಟದ ಕಚೇರಿ ಸ್ಥಾಪಿಸಲಾಗುವುದು. ವಕ್ಫ್ ಆಸ್ತಿ ಸಮುದಾಯದ ಅಭಿವೃದ್ಧಿಗೆ ಬಳಕೆಯಾಗಬೇಕು ಅದರಲ್ಲೂ ಶಾಲೆ ಹಾಗೂ ಆಸ್ಪತ್ರೆಗೆ ಹೆಚ್ಚು ಆದ್ಯತೆ ನೀಡಲಾಗುವುದು. ಎಲ್ಲರ ಸಹಕಾರ ದೊರೆತರೆ ದೇಶದಲ್ಲೇ ಮಾದರಿ ಆಗಿ ಕೆಲಸ ಮಾಡುತ್ತೇನೆ ಎಂದು ಹೇಳಿದರು.

ಮುಖ್ಯಮಂತ್ರಿಯವರ ರಾಜಕೀಯ ಕಾರ್ಯದರ್ಶಿ ನಸೀರ್ ಅಹಮದ್, ಇಲಾಖೆ ಕಾರ್ಯದರ್ಶಿ ಮನೋಜ್ ಜೈನ್, ನಿಗಮದ ಎಂಡಿ ಮೊಹಮದ್ ನಜೀರ್ ಉಪಸ್ಥಿತರಿದ್ದರು. ಇದನ್ನೂ ಓದಿ: VISL ಮುಚ್ಚದಂತೆ ಸಂಸದ ಬಿ.ವೈ ರಾಘವೇಂದ್ರ ನೇತೃತ್ವದ ನಿಯೋಗದಿಂದ ಮನವಿ

TAGGED:Minority WelfareMinority Welfare MinisterWakf Boardzameer ahmedಅಲ್ಪಸಂಖ್ಯಾತರ ಸಚಿವಾಲಯಕರ್ನಾಟಕಜಮೀರ್ ಅಹ್ಮದ್ವಖ್ಫ್ ಮಂಡಳಿ
Share This Article
Facebook Whatsapp Whatsapp Telegram

Cinema news

Sarse Ninna Seraga Sarse song jogi prem
ಸರ್ಸೆ ಸೆರಗ ಸೆರ್ಸೆ ಹಾಡಿನಲ್ಲಿ ಅಶ್ಲೀಲತೆ ಆರೋಪ – ನಿರ್ದೇಶಕ ಪ್ರೇಮ್ ಸೇರಿ ಹಲವರಿಗೆ ಮಹಿಳಾ ಆಯೋಗ ನೋಟಿಸ್
Cinema Latest Main Post Sandalwood
Dhurandhar 2
ವಿಶ್ವದಾದ್ಯಂತ ‘ಧುರಂಧರ್‌ 2’ ರಿಲೀಸ್‌ – ರಣವೀರ್‌ ಸಿಂಗ್‌ ಕಮಾಲ್‌
Bollywood Cinema Latest Main Post
KD Vulgar Song Controversy I will write and release a new song Director Prem apologizes 1
ಹೊಸ ಹಾಡನ್ನು ಬರೆದು ಬಿಡುಗಡೆ ಮಾಡುತ್ತೇನೆ: ಕ್ಷಮೆ ಕೇಳಿದ ಪ್ರೇಮ್‌
Bengaluru City Cinema Districts Latest Main Post
KD The Devil Thanks for opposing the song Nora Fatehi Reacts To Vulgar Song Controversy
ಸಾಂಗ್‌ ವಿರೋಧಿಸಿದ್ದಕ್ಕೆ ಥ್ಯಾಂಕ್ಸ್‌ – ಕೆಡಿಯ ಸರ್ಸೆ ಸೆರಗ ಹಾಡಿಗೆ ನೋರಾ ಕಿಡಿ ಕಿಡಿ
Bollywood Cinema Latest Sandalwood

You Might Also Like

PM Narendra Modis car diplomacy on display again as he rides with France President Macron in Mumbai
Latest

ಮಧ್ಯಪ್ರಾಚ್ಯದಲ್ಲಿ ಬಿಕ್ಕಟ್ಟು ಪರಿಹಾರಕ್ಕೆ ಪ್ರಯತ್ನ – ಮ್ಯಾಕ್ರನ್ ಜೊತೆ ಮೋದಿ ಮಾತುಕತೆ

Public TV
By Public TV
28 minutes ago
DJ Halli Murder
Bengaluru City

ಗುಪ್ತಾಂಗ, ದೇಹದ ಮೇಲೆ 17 ಬಾರಿ ಚಾಕುವಿನಿಂದ ಇರಿದು ಕ್ರೌರ್ಯ – ಅಪ್ರಾಪ್ತೆಯನ್ನ ಪ್ರೀತಿಸಿ, ಎಂಗೇಜ್ಮೆಂಟ್ ಆಗಿದ್ದ ಭಾವಿ ಪತಿ ಎಸ್ಕೇಪ್

Public TV
By Public TV
39 minutes ago
Drone hits Saudi Arabias Samref refinery
Latest

ಯುದ್ಧ ಆರಂಭವಾದ ಬಳಿಕವೂ ತೈಲ ರಫ್ತು ಮಾಡುತ್ತಿದ್ದ ಸೌದಿಯ ರಿಫೈನರಿ ಮೇಲೆಯೇ ಇರಾನ್‌ ಡ್ರೋನ್‌ ದಾಳಿ

Public TV
By Public TV
55 minutes ago
Ras Laffan
Latest

ವಿಶ್ವದ ಅತಿ ದೊಡ್ಡ LNG ಸ್ಥಾವರದ ಮೇಲೆ ಇರಾನ್‌ ದಾಳಿ- ಭಾರತದ ಮೇಲೆ ಪರಿಣಾಮ ಏನು?

Public TV
By Public TV
57 minutes ago
Javaramma
Districts

ಮಾಜಿ ಪ್ರಧಾನಿ ದೇವೇಗೌಡರ ಸಹೋದರಿ ನಿಧನ

Public TV
By Public TV
1 hour ago
plastics industry
Dakshina Kannada

ಇರಾನ್‌ ಯುದ್ಧ: ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳ ಪ್ಲಾಸ್ಟಿಕ್ ಉದ್ಯಮಕ್ಕೆ ಬಂದ್ ಭೀತಿ

Public TV
By Public TV
1 hour ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?