ಸಿದ್ದರಾಮಯ್ಯ ದೇವರಿದ್ದಂತೆ, ಅವ್ರನ್ನ ಬಿಟ್ಟು ಹೋದ್ರೆ ದೇವರಿಂದ ದೂರವಾದಂತೆ: ಜಮೀರ್

Public TV
1 Min Read
SIDDU AND ZAMEER

ಕೋಲಾರ: ಸಿದ್ದರಾಮಯ್ಯ (Siddaramaiah) ಅವರಿಂದ ದೂರವಾದರೆ ದೇವರಿಂದ ದೂರ ಆದಂತೆ ಎಂದು ಚಾಮರಾಜಪೇಟೆ ಶಾಸಕ ಜಮೀರ್ ಅಹ್ಮದ್ (Zameer Ahmed Khan) ಹೇಳಿದ್ರು.

Siddaramaiah 1

ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಗೌನಪಲ್ಲಿಯಲ್ಲಿ ಕಾಂಗ್ರೆಸ್‌ ಭಾರತ್ ಜೋಡೋ ಯಾತ್ರೆ (Bharat Jodo Yatra) ಯಲ್ಲಿ ಭಾಗವಹಿಸಿದ ವೇಳೆ ಸುದ್ದಿಗಾರರು ಸಿದ್ದರಾಮಯ್ಯ ಅವರಿಂದ ಅಂತರ ಕಾಯ್ದುಕೊಂಡಿದ್ದೀರಾ ಎಂದು ಪ್ರಶ್ನಿಸಿದರು. ಇದಕ್ಕುತ್ತರಿಸಿದ ಜಮೀರ್, ಸಿದ್ದರಾಮಯ್ಯ ಜೊತೆ ಫೆ.3 ರಿಂದ ಪ್ರಜಾಧ್ವನಿ ಯಾತ್ರೆಯಲ್ಲಿ ಭಾಗವಹಿಸುವೆ. ಫೆ.13 ರಂದು ಯಾತ್ರೆ ಮುಗಿಯಲಿದೆ. ನಂತರ ವಿಧಾನಸಭಾ ಅಧಿವೇಶನದಲ್ಲಿ ಭಾಗವಹಿಸುವೆ ಎಂದು ಅವರು ಹೇಳಿದ್ರು. ಇದನ್ನೂ ಓದಿ: ಜಾತ್ರೆಯಲ್ಲಿ ಬಾಂಬೆ, ಕೋಲ್ಕತ್ತಾ ತೋರಿಸುವ ರೀತಿ ಬಜೆಟ್: ಸಿದ್ದರಾಮಯ್ಯ ವಾಗ್ದಾಳಿ

Zameer Ahmed Khan 1

ಕೋಲಾರ ಕ್ಷೇತ್ರದಲ್ಲಿ ನಾಲ್ಕೈದು ದಿನ ಬಂದು ಕ್ಷೇತ್ರದಲ್ಲಿ ಓಡಾಡುವೆ, ಸಿದ್ದರಾಮಯ್ಯ ಕೋಲಾರದಲ್ಲಿ ಸ್ಪರ್ಧೆ ಮಾಡುವುದಾಗಿ ಇತ್ತೀಚೆಗೆ ಘೋಷಣೆ ಮಾಡಿದ್ದಾರೆ. ಅದರಂತೆ ಕ್ಷೇತ್ರದಲ್ಲಿ ಬಂದು ಪ್ರಚಾರ ಮಾಡುವೆ ಎಂದು ತಿಳಿಸಿದರು. ಇದನ್ನೂ ಓದಿ: ಭದ್ರಾ ಮೇಲ್ದಂಡೆ ಯೋಜನೆಗೆ ಬಜೆಟ್‍ನಲ್ಲಿ ಬಂಪರ್ – ಏನಿದು ಯೋಜನೆ? ಯಾರಿಗೆಲ್ಲ ಲಾಭ?

ನಾನು ಸಿದ್ದರಾಮಯ್ಯ ಜೊತೆ ಮಾಗಡಿ, ಮೈಸೂರು ಹೋಗಿದ್ದೆ ಅವರ ಜೊತೆಯಲ್ಲಿಯೇ ಇದ್ದೀನಿ. ನಾವು ಸಿದ್ದರಾಮಯ್ಯ ದೂರ ಎಲ್ಲಿ ಆಗಿದ್ದೀವಿ. ಸಿದ್ದರಾಮಯ್ಯ ಅವರಿಂದ ದೂರ ಆಗಲು ಸಾಧ್ಯವೇ ಎಂದು ಪ್ರಶ್ನಿಸಿದರು. ಇದೇ ವೇಳೆ ಕೇಂದ್ರ ಬಜೆಟ್ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ ಅವರು ಬಜೆಟ್ ನಾನು ನೋಡಿಲ್ಲ ಎಂದರು.

Live Tv
[brid partner=56869869 player=32851 video=960834 autoplay=true]

Join our Whatsapp group by clicking the below link
https://chat.whatsapp.com/E6YVEDajTzH06LOh77r25k

Share This Article
Leave a Comment

Leave a Reply

Your email address will not be published. Required fields are marked *