ಬೆಂಗಳೂರು: ಸಿದ್ದರಾಮಯ್ಯ ಅಲ್ಪಸಂಖ್ಯಾತರ ಟರ್ಮಿನೇಟರ್ ಎಂದಿದ್ದ ಮಾಜಿ ಸಿಎಂ ಹೆಚ್ಡಿ ಕುಮಾರಸ್ವಾಮಿ ವಿರುದ್ಧ ಮಾಜಿ ಸಚಿವ ಜಮೀರ್ ಅಹ್ಮದ್ ಖಾನ್ ಟ್ವೀಟ್ ಮಾಡುವ ಮೂಲಕ ಆಕ್ರೋಶ ಹೊರಹಾಕಿದ್ದಾರೆ.
ಜಮೀರ್ ಅಹ್ಮದ್ ಖಾನ್ ಅವರು ಟ್ವೀಟರ್ನಲ್ಲಿ, ನಿಜ, ಚಕ್ರ ತಿರುಗುತ್ತಿದೆ. ನಿಮ್ಮ ಒಂದೊಂದೇ ಬಣ್ಣ ಬಯಲಾಗಲು ಆರಂಭವಾಗಿದೆ. ಸಿದ್ದರಾಮಯ್ಯ ಅವರ ಬಗೆಗಿನ ನಿಮ್ಮ ಹೊಟ್ಟೆಕಿಚ್ಚಿನಿಂದ ಹಾಳಾಗುತ್ತಿರೋದು ನೀವೇ ಹೊರತು ಸಿದ್ದರಾಮಯ್ಯ ಅವರಲ್ಲ. “ಮನೆಯೊಳಗಣ ಕಿಚ್ಚು ಮನೆಯ ಸುಟ್ಟಲ್ಲದೆ ನೆರೆಮನೆಯ ಸುಡದು ಕೂಡಲ ಸಂಗಮ ದೇವ” ಆಗಾಗ ಇದನ್ನು ಓದಿ. ಕುಮಾರಸ್ವಾಮಿ ಸಾಧ್ಯವಾದರೆ ಬದಲಾಗಿ ಎಂದು ಬಸವಣ್ಣನ ವಚನದ ಮೂಲಕ ಹೆಚ್ಡಿಕೆ ವಿರುದ್ಧ ಸಿದ್ದರಾಮಯ್ಯ ಪರ ಬ್ಯಾಟ್ ಬೀಸಿದ್ದಾರೆ. ಇದನ್ನೂ ಓದಿ: ನಿಮ್ಮ ಅಂತ್ಯಕಾಲವೂ ಆರಂಭವಾಗಿದೆ – ಸಿದ್ದರಾಮಯ್ಯ ವಿರುದ್ಧ ಹೆಚ್ಡಿಕೆ ಟ್ವೀಟ್ ವಾರ್
ನಿಜ, ಚಕ್ರ ತಿರುಗುತ್ತಿದೆ. ನಿಮ್ಮ ಒಂದೊಂದೇ ಬಣ್ಣ ಬಯಲಾಗಲು ಆರಂಭವಾಗಿದೆ. @siddaramaiah ಅವರ ಬಗೆಗಿನ ನಿಮ್ಮ ಹೊಟ್ಟೆಕಿಚ್ಚಿನಿಂದ ಹಾಳಾಗುತ್ತಿರೋದು ನೀವೇ ಹೊರತು ಸಿದ್ದರಾಮಯ್ಯ ಅವರಲ್ಲ.
“ಮನೆಯೊಳಗಣ ಕಿಚ್ಚು
ಮನೆಯ ಸುಟ್ಟಲ್ಲದೆ
ನೆರೆಮನೆಯ ಸುಡದು ಕೂಡಲ ಸಂಗಮ ದೇವ” ಆಗಾಗ ಇದನ್ನು ಓದಿ @hd_kumaraswamy, ಸಾಧ್ಯವಾದರೆ ಬದಲಾಗಿ.. https://t.co/O5fmbYcp2B
— B Z Zameer Ahmed Khan (@BZZameerAhmedK) October 17, 2021
ಮತ್ತೊಂದೆಡೆ ಇದೇ ವಿಚಾರವಾಗಿ ಸಿದ್ದರಾಮಯ್ಯ ಅವರು ತಮ್ಮ ಟ್ವೀಟರ್ನಲ್ಲಿ, ಮಹಾತ್ಮ ಗಾಂಧೀಜಿ ಅವರನ್ನು ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು, ದಲಿತ ವಿರೋಧಿ ಎನ್ನುತ್ತಿದ್ದ ದಲಿತರು, ಮುಸ್ಲಿಂ ವಿರೋಧಿ ಎನ್ನುತ್ತಿದ್ದ ಮುಸ್ಲಿಂರು ಇದ್ದರು. ಮಹಾತ್ಮರ ಬೆನ್ನು ಬಿಡದ ಟೀಕಾಕಾರರು, ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ? ಸಬ್ ಕೋ ಸನ್ಮತಿ ದೇ ಭಗವಾನ್ ಎಂದು ಮಾರ್ಮಿಕವಾಗಿ ಟ್ವೀಟ್ ಮಾಡಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಮಾತು ವೇದವಾಕ್ಯ ಅಲ್ಲ: ಸಿದ್ದರಾಮಯ್ಯ
ಮಹಾತ್ಮ ಗಾಂಧೀಜಿ ಅವರನ್ನು
ಹಿಂದೂ ವಿರೋಧಿ ಎನ್ನುತ್ತಿದ್ದ ಹಿಂದೂಗಳು,
ದಲಿತ ವಿರೋಧಿ ಎನ್ನುತ್ತಿದ್ದ ದಲಿತರು,
ಮುಸ್ಲಿಮ್ ವಿರೋಧಿ ಎನ್ನುತ್ತಿದ್ದ ಮುಸ್ಲಿಮರು ಇದ್ದರು.
ಮಹಾತ್ಮರ ಬೆನ್ನು ಬಿಡದ ಟೀಕಾಕಾರರು
ನನ್ನಂತಹ ಹುಲುಮಾನವರನ್ನು ಬಿಡುತ್ತಾರೆಯೇ?
ಸಬ್ ಕೋ ಸನ್ಮತಿ ದೇ ಭಗವಾನ್.#MahatmaGandhiji
— Siddaramaiah (@siddaramaiah) October 17, 2021
ಮಾಜಿ ಸಿಎಂ ಹೆಚ್ಡಿ. ಕುಮಾರಸ್ವಾಮಿ ಅವರು ನಿನ್ನೆ, ಅಲ್ಪಸಂಖ್ಯಾತರ ಕಲ್ಯಾಣದ ಪೇಟೆಂಟ್ ತೆಗೆದುಕೊಂಡಂತೆ ಪೋಸು ಕೊಡುವ ‘ಸಿದ್ದಹಸ್ತ’ ಶೂರನ ನಿಜಬಣ್ಣ ಬಯಲು ಮಾಡುವ ಸಂದರ್ಭ ಬಂದಿದೆ. ಸ್ವಾರ್ಥ, ಸ್ವಜನ ಪಕ್ಷಪಾತ, ತಮ್ಮ ಬೆಂಬಲಿಗರ ರಾಜಕೀಯ ಅಭಿವೃದ್ಧಿಗಾಗಿ ಪಕ್ಷಕ್ಕಾಗಿ ಅಹರ್ನಿಷಿ ದುಡಿದ ಅಲ್ಪಸಂಖ್ಯಾತ ನಾಯಕರನ್ನು ಗುರಿ ಇಟ್ಟು ಮುಗಿಸಲಾಗುತ್ತಿದೆ. ತನ್ನೆಲ್ಲ ಸಿದ್ದಕಲೆ, ಸಿದ್ದಸೂತ್ರಗಳೆನ್ನೆಲ್ಲ ಪೋಣಿಸಿ ‘ಅಹಿಂದ’ ಎಂದು ಜನರನ್ನು ಅಡ್ಡದಾರಿ ಹಿಡಿಸಿದ ‘ಸಿದ್ದಹಸ್ತ ಶೂರರು’ ತಮ್ಮ ಸ್ವಪಕ್ಷದಲ್ಲೇ ಮುಸ್ಲಿಂ ನಾಯಕರನ್ನು ಒಬ್ಬೊಬ್ಬರನ್ನಾಗಿಯೇ ಟಾರ್ಗೆಟ್ ಮಾಡುತ್ತಾ ಅಲ್ಪಸಂಖ್ಯಾತರ ಅಂತ್ಯ ರಾಜಕಾರಣದ ಟರ್ಮಿನೇಟರ್ ಆಗಿ ಹೊರಹೊಮ್ಮಿದ್ದಾರೆ ಎಂದು ಆಕ್ರೋಶ ಹೊರಹಾಕಿದ್ದರು.