– ಕುಮಾರಸ್ವಾಮಿಯವರು ಬಹಳ ಮುಸ್ಲಿಂ ಜನರನ್ನ ಬಲಿ ತೆಗೆದುಕೊಂಡಿದ್ದಾರೆ
– ಕುಮಾರಸ್ವಾಮಿ ಟಾರ್ಗೆಟ್ ಅಲ್ಪಸಂಖ್ಯಾತರು
ಹುಬ್ಬಳ್ಳಿ: ಸಿಂದಗಿಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ. ಸಿಎಂ ಉದಾಸಿ ರೈಟ್ ಪರ್ಸನ್, ರಾಂಗ್ ಪಾರ್ಟಿಯಾಗಿದೆ. ಎರಡೂ ಉಪಚುನಾವಣೆಯಲ್ಲಿ ಜೆಡಿಎಸ್ ಲೆಕ್ಕಕ್ಕೆ ಇಲ್ಲ ಎಂದು ಮಾಜಿ ಸಚಿವ ಜಮೀರ್ ಅಹ್ಮದ್ ಭವಿಷ್ಯ ನುಡಿದಿದ್ದಾರೆ.
ಹುಬ್ಬಳ್ಳಿಯಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸಿಂದಗಿಯಲ್ಲಿ ನಮ್ಮ ಅಭ್ಯರ್ಥಿ ಗೆಲ್ಲುತ್ತಾರೆ. ಹಾನಗಲ್ನಲ್ಲಿ ಶ್ರೀನಿವಾಸ ಮಾನೆ ಒಳ್ಳೆಯ ಕೆಲಸ ಮಾಡಿದ್ದಾರೆ. ಶ್ರೀನಿವಾಸ ಮಾನೆ ಯಾರು ಮಾಡದ ಕೆಲಸ ಮಾಡಿದ್ದಾರೆ, ಅವರು ಜಯ ನಿಶ್ಚಿತವಾಗಿದೆ. ಸಿಎಂ ಉದಾಸಿ ರೈಟ್ ಪರ್ಸನ್, ರಾಂಗ್ ಪಾರ್ಟಿ. ಬಿಜೆಪಿಯಿಂದ ಅವರ ಕುಟುಂಬಕ್ಕೆ ಟಿಕೆಟ್ ಬಿಡಬೇಕಾಗಿತ್ತು. ಉದಾಸಿ ಕುಟುಂಬಕ್ಕೆ ಟಿಕೆಟ್ ನೀಡದ ಕಾರಣಕ್ಕೆ ಅವರು ಸೋತು ಬಿಟ್ಟಿದ್ದಾರೆ. ಎರಡೂ ಉಪಚುನಾವಣೆಯಲ್ಲಿ ಜೆಡಿಎಸ್ ಲೆಕ್ಕಕ್ಕೆ ಇಲ್ಲ ಎಂದು ವಾಗ್ದಾಳಿ ಮಾಡಿದ್ದಾರೆ. ಇದನ್ನೂ ಓದಿ: ರೇವಣ್ಣ DCM ಆಗ್ತಾನೆಂದು ಬಿಎಸ್ವೈಗೆ ಅಧಿಕಾರ ಬಿಟ್ಟು ಕೊಡಲಿಲ್ಲ, ನನ್ನ ಬಳಿ ವೀಡಿಯೋ ದಾಖಲೆ ಇದೆ: ಜಮೀರ್
ಬಸವಕಲ್ಯಾಣದಲ್ಲಿ ಜೆಡಿಎಸ್ ನೋಡಿ ಮತ ಹಾಕಿಲ್ಲಾ, ಅಲ್ಲಿನ ವ್ಯಕ್ತಿಯ ನೋಡಿ ಮತ ಹಾಕಿದ್ದಾರೆ. ಇದರಿಂದ ಅಲ್ಲಿ ಬಿಜೆಪಿ ಗೆಲ್ಲಲು ಸಹಾಯವಾಗಿದೆ. ಉಪಚುನಾವಣೆಯಲ್ಲಿ ಸೂಟ್ಕೇಸ್ ರಾಜಕಾರಣ ಮಾಡಿ, ಅಲ್ಪಸಂಖ್ಯಾತರನ್ನ ಬಲಿ ತೆಗೆದುಕೊಂಡಿದ್ದಾರೆ. ಹಾನಗಲ್ನಲ್ಲಿ ಸೂಟ್ಕೇಸ್ ಬರದ ಕಾರಣ ಒಂದೇ ದಿನ ಪ್ರಚಾರ ಮಾಡಿದ್ದಾರೆ. ಸೂಟ್ಕೇಸ್ ಪದ್ದತಿಯ ಬಗ್ಗೆ ನಾನು ಹೇಳುತ್ತಿಲ್ಲ. ದೇವೇಗೌಡ್ರ ಮೊಮ್ಮಗ ಸಂಸದ ಪ್ರಜ್ವಲ್ ಹೇಳಿದ್ದಾರೆ ಎಂದಿದ್ದಾರೆ. ಇದನ್ನೂ ಓದಿ: ಕೈಲಾಗದವನು ಮೈ ಪರಚಿಕೊಂಡ ಹಾಗೆ, ಜಮೀರ್ ಸ್ಥಿತಿ: ಹೆಚ್ಡಿಕೆ ಲೇವಡಿ
ಕುಮಾರಸ್ವಾಮಿಯವರು ಬಹಳ ಮುಸ್ಲಿಂ ಜನರನ್ನ ಬಲಿ ತೆಗೆದುಕೊಂಡಿದ್ದಾರೆ. ತನ್ವೀರ್ ಸೇಠ್ರನ್ನ ಸೋಲಿಸಿದ್ದೇ ಕುಮಾರಸ್ವಾಮಿ. ಕುಮಾರಸ್ವಾಮಿ ಟಾರ್ಗೆಟ್ ಅಲ್ಪಸಂಖ್ಯಾತರು. ಅಲ್ಪಸಂಖ್ಯಾತರನ್ನ ಮುಗಿಸಿದ್ದು ಸಿದ್ದರಾಮಯ್ಯ ಅಲ್ಲ, ಕುಮಾರಸ್ವಾಮಿ ಎಂದು ಜಮೀರ್ ಅಹ್ಮದ್ ಆರೋಪ ಮಾಡಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿಯನ್ನು ಆನೆಯನ್ನಾಗಿ ಮಾಡಿದ್ದು ನಾವು: ಜಮೀರ್