Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರ ನಂತ್ರ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲೂ ಜಮೀರ್ ಹೆಸ್ರು: ಸಿ.ಟಿ.ರವಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Chikkamagaluru | ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರ ನಂತ್ರ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲೂ ಜಮೀರ್ ಹೆಸ್ರು: ಸಿ.ಟಿ.ರವಿ

Chikkamagaluru

ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರ ನಂತ್ರ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲೂ ಜಮೀರ್ ಹೆಸ್ರು: ಸಿ.ಟಿ.ರವಿ

Public TV
Last updated: April 29, 2022 1:50 pm
Public TV
Share
2 Min Read
CT Ravi
SHARE

ಚಿಕ್ಕಮಗಳೂರು: ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರದಲ್ಲಿ ನಡೆದ ಗಲಭೆಯಲ್ಲೂ ಜಮೀರ್ ಅಹ್ಮದ್ ಖಾನ್ ಹೆಸರು ಕೇಳಿಬಂದಿತ್ತು. ಈಗ ಹುಬ್ಬಳ್ಳಿ ಗಲಭೆ ಪ್ರಕರಣದಲ್ಲೂ ಜಮೀರ್ ಹೆಸರು ಕೇಳಿ ಬರುತ್ತಿದೆ ಎಂದು ಬಿಜೆಪಿ ರಾಷ್ಟ್ರ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಹೇಳಿದ್ದಾರೆ.

ZAMEER

ಹುಬ್ಬಳಿ ಗಲಭೆಕೋರರಿಗೆ ಜಮೀರ್ ಅಹ್ಮದ್ ಖಾನ್ ಅವರು ರಂಜಾನ ಕಿಟ್ ಹಾಗೂ ಹಣ ವಿತರಣೆ ಮಾಡಿದ ವಿಚಾರವಾಗಿ ಚಿಕ್ಕಮಗಳೂರಿನಲ್ಲಿ ಮಾಧ್ಯದವರೊಂದಿಗೆ ಮಾತನಾಡಿದ ಸಿ.ಟಿ.ರವಿ ಅವರು, ಡಿಜೆಹಳ್ಳಿ-ಕೆಜೆಹಳ್ಳಿ, ಪಾದರಾಯನಪುರದಲ್ಲಿ ನಡೆದ ಗಲಭೆ ಹಿಂದೆ ಕಾಂಗ್ರೆಸ್ ಪಾತ್ರವಿತ್ತು. ಅವರಿಗೆ ಹಣ, ವಕೀಲರ ನೇಮಕ ಎಲ್ಲ ಮಾಡಿದ್ದು ಕಾಂಗ್ರೆಸ್, ಆ ಸಂದರ್ಭದಲ್ಲಿ ಕೂಡ ಜಮೀರ್ ಹೆಸರು ಕೇಳಿ ಬಂದಿತ್ತು. ಈಗ ಹುಬ್ಬಳ್ಳಿ ಪ್ರಕರಣದಲ್ಲೂ ಜಮೀರ್ ಹೆಸರು ಕೇಳಿ ಬರುತ್ತಿದೆ. ಮಗು ಚಿವುಟಿ ತೊಟ್ಟಿಲು ತೂಗುವ ಕೆಲಸವನ್ನು ಮಾಡುತ್ತಿದ್ದಾರೆ. ಕೋಮುಗಲಭೆ ಹುಟ್ಟುಹಾಕಿ ವೋಟ್ ಬ್ಯಾಂಕ್ ಗಟ್ಟಿಯಾಗಿ ಇಟ್ಟಿಕೊಳ್ಳಲು ಮುಂದಾಗಿದ್ದಾರೆ. ಅವರಿಗೆ ನೆರವು ಕೊಡುವ ಪಾತ್ರ ಕಾಂಗ್ರೆಸ್‍ನದ್ದು ಇರಬಹುದು ಎಂಬ ಅನುಮಾನಕ್ಕೆ ಸಾಕ್ಷಿ ಒದಗಿಸುವ ರೀತಿ ಜಮೀರ್, ಕಾಂಗ್ರೆಸ್ ನಡುವಳಿಕೆ ಇದೆ ಎಂದಿದ್ದಾರೆ.

HUBBALLI MOULVI 2

ಹಿಜಬ್ ಹಿಂದೆ ಪಿಎಫೈ ಒಂದೇ ಅಲ್ಲ ಕಾಂಗ್ರೆಸ್ ಇದೆ ಎನ್ನುವ ಅನುಮಾನವಿತ್ತು. ಆಗ ಜಾತ್ಯಾತಿತಕ್ಕೆ ಚಾಂಪಿಯನ್ ಎನಿಸಿಕೊಂಡವರು ಹಿಜಬ್ ಪರ ನಿಂತರು. ವಕೀಲರಿಗೆ ನೆರವು ಕೊಟ್ಟಿದ್ದು ಕಾಂಗ್ರೆಸ್, ಅವರೆಲ್ಲಾ ಐದು – ಹತ್ತು ಸಾವಿರಕ್ಕೆ ಬರುವ ವಕೀಲರಲ್ಲ. ಎದ್ದು ನಿಂತರೆ 50 ಲಕ್ಷ ಬಿಲ್ ಮಾಡುತ್ತಾರೆ. ಅವರೆಲ್ಲಾ ಕಾಂಗ್ರೆಸ್ ಜೊತೆ ಸಂಪರ್ಕದಲ್ಲಿದ್ದ ವಕೀಲರಾಗಿದ್ದಾರೆ. ಹಿಜಬ್, ಪಾದರಾಯನಪುರ, ಡಿಜೆಹಳ್ಳಿ-ಕೆಜೆಹಳ್ಳಿ, ಹುಬ್ಬಳ್ಳಿ ಪ್ರಕರಣದಲ್ಲಿ ಕಾಂಗ್ರೆಸ್ ಪಾತ್ರ ಇರುವುದು ಸ್ಪಷ್ಟವಾಗುತ್ತದೆ ಎಂದು ತಿಳಿಸಿದ್ದಾರೆ. ಇದನ್ನೂ ಓದಿ:  ಗಲಭೆಕೋರರ ಕುಟುಂಬಕ್ಕೆ ಜಮೀರ್ ಫುಡ್‌ಕಿಟ್ ಹಂಚಿಕೆಗೆ ಬ್ರೇಕ್

hijab smg 1

ತಾನು ಕಳ್ಳನ ಪರ ಎಂಬ ಮಾತು ಕಾಂಗ್ರೆಸ್‍ಗೆ ಅನ್ವಯವಾಗುತ್ತದೆ. ತಿಪ್ಪೆ ಸಾರಿಸುವುದರಲ್ಲಿ ಕಾಂಗ್ರೆಸ್ಸಿಗರು ನಿಸ್ಸೀಮರು, ಬಿಜೆಪಿಯೂ ಹಾಗೇ ಎಂದು ಭಾವಿಸಿದ್ದಾರೆ. ಬಿಜೆಪಿ ತಿಪ್ಪೆ ಸಾರಿಸುವುದಾಗಿದ್ದರೆ ದಿವ್ಯಾ ಹಾಗರಗಿ ಮೇಲೆ ಎಫ್‍ಐಆರ್ ಆಗುತ್ತಿರಲಿಲ್ಲ. ಎಫ್‍ಐಆರ್ ಮಾಡುವುದರ ಜೊತೆಗೆ, ಸಿಐಡಿಗೆ ವಹಿಸಿ, ಆಕೆಯ ಗಂಡನನ್ನು, ಪ್ರಕರಣದಲ್ಲಿರುವ ಎಲ್ಲರನ್ನು ಬಿಜೆಪಿ ಸರ್ಕಾರ ಬಂಧಿಸಿದೆ. ಬಂಧನವಾಗದಿದ್ದರೆ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳುತ್ತೇವೆ ಅಂತ ಹೇಳಿದ್ದು ಬಿಜೆಪಿ, ಯುಪಿ ಮಾದರಿಯಲ್ಲಿ ಕ್ರಮಕೈಗೊಳ್ಳುತ್ತೇವೆ ಎಂದು ಪೇಪರ್ ನೋಟಿಫಿಕೇಶನ್ ಕೊಟ್ಟಿದ್ದು ಬಿಜೆಪಿ ಎಂದು ಹರಿಹಾಯ್ದಿದ್ದಾರೆ. ಇದನ್ನೂ ಓದಿ: ಮತ್ತೆ ಗಲಭೆಕೋರರ ಪರ ನಿಂತ ಜಮೀರ್- ಕಲ್ಲು ಹೊಡೆದವರ ಕುಟುಂಬಕ್ಕೆ 5 ಸಾವಿರ, ಫುಡ್‍ಕಿಟ್

ಹಿಂದೆ ಇದ್ದ ಮುಖ್ಯಮಂತ್ರಿ ಮೇಲೆ ವಾಚ್ ಪ್ರಕರಣ ಬಂದಿತ್ತು. ಕಳ್ಳತನದ ವಾಚು, ಅಕ್ರಮದ ವಾಚು ಸಿಎಂ ಕೈಗೆ ಹೇಗೆ ಬಂತು ಎಂದು ತನಿಖೆಯೇ ಆಗಲಿಲ್ಲ. ರಿಡ್ಯೂ ಹೆಸರಲ್ಲಿ ಅರ್ಕಾವತಿ ಭೂ ಹರಗದಲ್ಲಿ ಸಾವಿರಾರು ಎಕರೆ ಡಿನೋಟಿಫೈ ಮಾಡಿದರು. 10-20 ಲಕ್ಷ, ಕೆಲವಡೆ 50 ಲಕ್ಷ ಪಡೆದರು, ತನ್ನ ಕುತ್ತಿಗೆಗೆ ಬರುತ್ತದೆ ಎನ್ನುತ್ತಿದ್ದ ಹಾಗೆಯೇ ತಿಪ್ಪೆ ಸಾರಿಸಿದರು. ಕೆಂಪಣ್ಣ ಆಯೋಗ ಕೂಡ ಕಾಂಗ್ರೆಸ್ ಪಾತ್ರವನ್ನು ಎತ್ತಿ ಹಿಡಿದಿತ್ತು. ಪ್ರಶಂಸೆ ಹೇಳುವ ಮನಸ್ಥಿತಿ ಅವರಿಗಿಲ್ಲ, ಕಾಂಗ್ರೆಸ್‍ನಂತೆ ಬಿಜೆಪಿ ಅಲ್ಲ. ಈ ವಿಷಯದಲ್ಲಿ ಯಾರೇ, ಎಷ್ಟೆ ಪ್ರಭಾವಶಾಲಿಗಳಿದ್ದರೂ ಶಿಕ್ಷೆಯಾಗುತ್ತದೆ. ಮುಚ್ಚಾಕುವ ಪ್ರಶ್ನೆಯೇ ಇಲ್ಲ ಎಂದು ಹೇಳಿದ್ದಾರೆ.

TAGGED:bjpChikkamagaluruCT RaviHubballi RiotsZameer Ahmed Khanಚಿಕ್ಕಮಗಳೂರುಜಮೀರ್ ಅಹ್ಮದ್ ಖಾನ್ಬಿಜೆಪಿಸಿ.ಟಿ ರವಿಹುಬ್ಬಳ್ಳಿ ಗಲಭೆ
Share This Article
Facebook Whatsapp Whatsapp Telegram

Cinema news

Sanvi Sudeep 1
ʻನನ್ನ ದೇಹ ಚರ್ಚೆಯ ವಿಷಯವಲ್ಲʼ – ಮಗಳು ಸಾನ್ವಿ ಹೇಳಿಕೆ ಸಮರ್ಥಿಸಿಕೊಂಡ ಸುದೀಪ್
Bengaluru City Cinema Latest Sandalwood Top Stories
vijayalakshmi 1 1
ನನ್ನ ದೂರಿಗೆ ನಿರ್ಲಕ್ಷ್ಯ, ಬೇರೆ ಮಹಿಳೆಯ ದೂರಿಗೆ ಒಂದೇ ದಿನದಲ್ಲಿ ಕ್ರಮ: ವಿಜಯಲಕ್ಷ್ಮಿ ಬೇಸರ
Bengaluru City Cinema Crime Latest Main Post
sunny leone
ಮಥುರಾದಲ್ಲಿ ಸನ್ನಿ ಲಿಯೋನ್ ʻDJ Nightʼ ನ್ಯೂ ಇಯರ್ ಕಾರ್ಯಕ್ರಮ ರದ್ದು
Bollywood Cinema Latest National Top Stories
father movie team
ಭಾವುಕ ಪ್ರಪಂಚಕ್ಕೆ ಕರೆದೊಯ್ಯುವ ‘ಫಾದರ್’ ಥೀಮ್ ಸಾಂಗ್
Cinema Latest Sandalwood Top Stories

You Might Also Like

Bengaluru Girl Suicide copy
Bengaluru City

ತಂದೆ-ತಾಯಿ ಬೇರೆಯಾಗಿದ್ದಕ್ಕೆ ಮನನೊಂದು ಬಾಲಕಿ ಆತ್ಮಹತ್ಯೆ

Public TV
By Public TV
12 minutes ago
N.Vinaya Hegde
Dakshina Kannada

ನಿಟ್ಟೆ ಸಮೂಹ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ಎನ್.ವಿನಯ್ ಹೆಗ್ಡೆ ನಿಧನ

Public TV
By Public TV
51 minutes ago
pm modi mann ki baat
Latest

ಹೊಸ ವರ್ಷ ಎಲ್ಲರಿಗೂ ಆರೋಗ್ಯ, ಸಮೃದ್ಧಿ ತರಲಿ: ಜನತೆಗೆ ಪ್ರಧಾನಿ ಮೋದಿ ವಿಶ್‌

Public TV
By Public TV
2 hours ago
resort police raid
Bengaluru Rural

ನ್ಯೂ ಇಯರ್ ಸಂಭ್ರಮದಲ್ಲಿದ್ದವರಿಗೆ ಶಾಕ್; ಅನುಮತಿ ಇಲ್ಲದೇ ಪಾರ್ಟಿ ನಡೆಸುತ್ತಿದ್ದ ರೆಸಾರ್ಟ್‌ ಮೇಲೆ ಪೊಲೀಸರ ದಾಳಿ

Public TV
By Public TV
2 hours ago
Putin house attack
Latest

ಪುಟಿನ್‌ ಮನೆ ಮೇಲೆ ದಾಳಿ ಆರೋಪ; ದಾಳಿಯ ಡ್ರೋನ್‌ ವೀಡಿಯೊ ರಿಲೀಸ್‌ ಮಾಡಿದ ರಷ್ಯಾ

Public TV
By Public TV
3 hours ago
Bengaluru Corporation Circle Cab Driver Assault
Bengaluru City

ಕ್ಯಾಬ್‌ಗೆ ಕಾರು ಟಚ್ – ಪ್ರಶ್ನಿಸಿದ್ದಕ್ಕೆ ಕ್ಯಾಬ್ ಚಾಲಕನ ಮೇಲೆ ಯುವಕರ ಗುಂಪಿನಿಂದ ಹಲ್ಲೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?