– ಕಳೆದ ಬಾರಿ 60 ಸಾವಿರ ಮತ ಪಡೆದಿದ್ದ ಅಭ್ಯರ್ಥಿ
ಬೆಂಗಳೂರು: ರಾಜರಾಜೇಶ್ವರಿ ಉಪ ಚುನಾವಣೆಯಲ್ಲಿ ಜೆಡಿಎಸ್ ಈ ಬಾರಿ ಹೀನಾಯವಾಗಿ ಸೋಲನುಭವಿಸಿದ್ದು, ಠೇವಣಿಯನ್ನು ಕಳೆದುಕೊಂಡಿದೆ.
- Advertisement 2
ಉಪಚುನಾವಣೆ ಬಿಜೆಪಿ ಅಭ್ಯರ್ಥಿ ಮುನಿರತ್ನ ಗೆಲುವಿನ ನಗೆ ಬೀರಿದ್ದು, ಕಾಂಗ್ರೆಸ್ನ ಕುಸುಮಾ ಎರಡನೇ ಸ್ಥಾನದಲ್ಲಿದ್ದಾರೆ. ಆದರೆ ಜೆಡಿಎಸ್ ಅಭ್ಯರ್ಥಿ ಕೃಷ್ಣಮೂರ್ತಿ 10,251 ಮತಗಗಳನ್ನು ಪಡೆಯುವ ಮೂಲಕ ಠೇವಣಿ ಕಳೆದುಕೊಂಡಿದ್ದಾರೆ. ಕಳೆದ ಬಾರಿ ಜೆಡಿಎಸ್ 60 ಸಾವಿರ ಮತಗಳನ್ನು ಪಡೆದಿತ್ತು. ಆದರೆ ಈ ಬಾರಿ ಇದರ ಅರ್ಧದಷ್ಟು ಮತಗಳನ್ನು ಸಹ ಜೆಡಿಎಸ್ ಅಭ್ಯರ್ಥಿ ಪಡೆದಿಲ್ಲ. ಒಟ್ಟು 57,936 ಮತಗಳ ಅಂತರದಿಂದ ಮುನಿರತ್ನ ಈ ಚುನಾವಣೆಯನ್ನು ಗೆದ್ದಿದ್ದಾರೆ.
- Advertisement 3
ಚಲಾವಣೆಯಾದ ಒಟ್ಟು ಮತಗಳ ಪೈಕಿ 6ನೇ 1 ಭಾಗದಷ್ಟು ಮತಗಳನ್ನು ಪಡೆದರೆ ಠೇವಣಿ ಉಳಿಸಿಕೊಂಡಂತೆ. ಈ ಬಾರಿ ಒಟ್ಟು 2,09,828 ಮತಗಳು ಚಲಾವಣೆಯಗಿದ್ದು, ಇದರ ಒಂದು ಭಾಗ ಎಂದರೆ 34,971 ಮತಗಳನ್ನು ಜೆಡಿಎಸ್ ಅಭ್ಯರ್ಥಿ ಪಡೆಯಬೇಕಿತ್ತು. ಆದರೆ 24ನೇ ಸುತ್ತಿಗೆ ಜೆಡಿಎಸ್ ಪಡೆದ ಮತ ಕೇವಲ 10,197. ಹೀಗಾಗಿ ಜೆಡಿಎಸ್ ಅಭ್ಯರ್ಥಿ ಠೇವಣಿ ಕಳೆದುಕೊಂಡು ಹೀನಾಯವಾಗಿ ಸೋಲನುಭವಿಸಿದಂತಾಗಿದೆ.
- Advertisement 4