ಬೀದರ್: ಜಿಲ್ಲಾ ಪಂಚಾಯತ್ ಬಸವಕಲ್ಯಾಣ ವಿಭಾಗದಲ್ಲಿ ಗ್ರಾಮೀಣ ಕುಡಿಯುವ ನೀರು ಯೋಜನೆಯ ಕಿರಿಯ ಅಭಿಯಂತರರಾಗಿ ಕಾರ್ಯನಿರ್ವಹಿಸುತ್ತಿದ್ದ ಸುರೇಶ್ ಮೋರೆ ನಿವಾಸದ ಮೇಲೆ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದರು. ದಾಳಿಯಲ್ಲಿ ನಗದು, ಚಿನ್ನಾಭರಣ ಮತ್ತು ಆಸ್ತಿ ಪತ್ರಗಳನ್ನು ಅಧಿಕಾರಿಗಳು ವಶಕ್ಕೆ ಪಡೆದುಕೊಂಡಿದ್ದಾರೆ.
- Advertisement 2
ಬಸವಕಲ್ಯಾಣದ ಶಿವಾಜಿ ನಗರದ ಸುರೇಶ್ ಮೋರೆ ನಿವಾಸದಲ್ಲಿ 15 ಲಕ್ಷ ನಗದು, 750 ಗ್ರಾಂ ಚಿನ್ನ, 3 ನಿವೇಶನಗಳ ಆಸ್ತಿ ಪತ್ರ ಪತ್ತೆಯಾಗಿದೆ. ಜೊತೆಗೆ 10 ಲಕ್ಷ ಎಫ್ಡಿ ಹಾಗೂ 20 ಲಕ್ಷ ಬ್ಯಾಂಕ್ ಬ್ಯಾಲೆನ್ಸ್ ಹೊಂದಿರೋದು ದಾಳಿಯಲ್ಲಿ ಬೆಳಕಿಗೆ ಬಂದಿದೆ. ಇದನ್ನೂ ಓದಿ: ದರ್ಶನ್ ನನ್ನ ಮೇಲೆ ಹಲ್ಲೆ ನಡೆಸಿಲ್ಲ, ಕೋಮಾದಲ್ಲಿಯೂ ಇಲ್ಲ: ಗೋಪಾಲ್ ರಾಜ್
- Advertisement 3
- Advertisement 4
ಬೀದರ್ ಜಿಲ್ಲೆಯಲ್ಲಿ ಇಂದು ಮೂರು ಕಡೆ ಏಕ ಕಾಲದಲ್ಲಿ ಎಸಿಬಿ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಎಸಿಬಿ ಎಸ್ಪಿ ಮಹೇಶ್ ಮೇಘಣ್ಣನವರ್ ಮಾರ್ಗದರ್ಶನದಲ್ಲಿ ದಾಳಿ ನಡೆದಿತ್ತು. ಇನ್ನಿಬ್ಬರು ಅಧಿಕಾರಿಗಳ ಆಸ್ತಿ ವಿವರದ ಮಾಹಿತಿ ತಿಳಿದು ಬಂದಿಲ್ಲ. ಇದನ್ನೂ ಓದಿ: ದರ್ಶನ್ ಒಮ್ಮೆ ಕೆಟ್ಟದಾಗಿ ಬೈದ್ರು ಅದಕ್ಕೆ ಕೆಲಸ ಬಿಟ್ಟೆ: ಹಾರ್ಸ್ ರೈಡರ್ ಸಂತೋಷ್