ತುಮಕೂರು: ನಗರದ ಹೊರವಲಯದಲ್ಲಿರುವ ದೇವರಾಯನದುರ್ಗ ರಸ್ತೆಯ ಬಳಿ ಕರಡಿಯೊಂದು ಕಾಣಿಸಿಕೊಂಡಿದ್ದು, ಸಾರ್ವಜನಿಕರಲ್ಲಿ ಆತಂಕ ಉಂಟುಮಾಡಿದೆ.
ದೇವರಾಯನದುರ್ಗ ರಸ್ತೆಯ ಕೆಂಪೇಗೌಡ ಕಾಲೇಜಿನ ಸಮೀಪ ಕರಡಿ ಕಂಡುಬಂದಿದೆ. ಶುಕ್ರವಾರ ಸಂಜೆ ಸುಮಾರು 5 ಗಂಟೆ ಮತ್ತು ಇವತ್ತು ಬೆಳಗಿನ ಜಾವ ಒಂದೇ ಜಾಗದಲ್ಲಿ ಎರಡು ಬಾರಿ ಕರಡಿ ಪ್ರತ್ಯಕ್ಷಗೊಂಡಿದೆ. ಕಾಲೇಜಿನ ಸಮೀಪ ಬೆಟ್ಟದ ತಪ್ಪಲಿನಲ್ಲಿ ಎರಡು ಕರಡಿಗಳು ಒಟ್ಟಿಗೆ ವಿಹರಿಸುತಿದ್ದವು.
- Advertisement 2
- Advertisement 3
ತುಮಕೂರಿನ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಚಿರತೆ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕವನ್ನು ಉಂಟು ಮಾಡುತ್ತಿತ್ತು. ಇದೀಗ ಕರಡಿ ಕಾಲೇಜಿನ ಸಮೀಪವೇ ಕಾಣಿಸಿಕೊಂಡಿದ್ದು, ಜನರಲ್ಲಿ ಮತ್ತಷ್ಟು ಭಯವನ್ನು ಹೆಚ್ಚು ಮಾಡಿದೆ.
- Advertisement 4
ಈ ನಡುವೆ ಕರಡಿ ಯಾರ ಮೇಲೆಯೂ ದಾಳಿ ಮಾಡಿದ್ದ ಬಗ್ಗೆ ವರದಿ ಆಗಿಲ್ಲ. ಆದರೆ ಅರಣ್ಯ ಪ್ರದೇಶ ಸಮೀಪವಿರುವುದರಿಂದ ಗುಡ್ಡಗಾಡು ಆಯಕಟ್ಟಿನ ಸ್ಥಳವಾಗಿರುವುದರಿಂದ ಆಗಾಗ ಕಾಡು ಪ್ರಾಣಿಗಳು ಕಾಣಿಸಿಕೊಳ್ಳುತ್ತವೆ. ಹೀಗಾಗಿ ಸಾರ್ವಜನಿಕರು ಎಚ್ಚರದಿಂದ ಇರುವಂತೆ ಅರಣ್ಯ ಇಲಾಖೆ ಸೂಚಿಸಿದೆ.