ನವದೆಹಲಿ: ವ್ಯಕ್ತಿ ಕುಡಿದು ಮೃತಪಟ್ಟರೆ ಆತನ ಕುಟುಂಬಸ್ಥರಿಗೆ ವಿಮೆ(ಇನ್ಶೂರೆನ್ಸ್) ಹಣ ಸಿಗಲ್ಲ ಎಂದು ಸುಪ್ರೀಂಕೋರ್ಟ್ ಮಹತ್ವದ ತೀರ್ಪು ನೀಡಿದೆ.
ಅಪಘಾತದಿಂದ ಮೃತಪಟ್ಟರೆ ಅಥವಾ ಅಪಘಾತದಿಂದ ಗಂಭೀರ ಗಾಯಗೊಂಡಿದ್ದರೆ ಮಾತ್ರ ವ್ಯಕ್ತಿಯ ಕುಟುಂಬದವರು ವಿಮೆ ಹಣ ಪಡೆಯಬಹುದು. ಆದರೆ ವಿಪರೀತ ಕುಡಿದು ಬಿದ್ದು ಸಾವನ್ನಪ್ಪಿದರೆ ಆ ವ್ಯಕ್ತಿಗಳು ವಿಮೆ ಹಣಕ್ಕೆ ಅರ್ಹರಲ್ಲ ಎಂದು ಕೋರ್ಟ್ ತಿಳಿಸಿದೆ.
- Advertisement 2
ಈ ತೀರ್ಪು ನೀಡಲು ಕಾರಣವೇನು..?
ವ್ಯಕ್ತಿಯೊಬ್ಬ ಅತಿಯಾಗಿ ಮದ್ಯಪಾನ ಮಾಡಿ ಉಸಿರುಗಟ್ಟಿ ಮೃತಪಟ್ಟಿದ್ದನು. ಹೀಗಾಗಿ ಆತನ ಕುಟುಂಬದವರು ವಿಮೆ ಹಣ ನೀಡುವಂತೆ ಸಂಸ್ಥೆಗೆ ಆದೇಶ ನೀಡುವಂತೆ ಕೋರಿ ಕೋರ್ಟಿಗೆ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿಯ ವಿಚಾರಣೆಯನ್ನು ನಡೆಸಿದ ಕೋರ್ಟ್ ತೀರ್ಪು ಪ್ರಕಟಿಸಿದೆ.
- Advertisement 3
ಆಗಿದ್ದೇನು..?
ಶಿಮ್ಲಾ ಜಿಲ್ಲೆಯ ಚೌಪಾಲ್ ರಾಜ್ಯ ಅರಣ್ಯ ನಿಗಮದಲ್ಲಿ ಕೆಲಸ ಮಾಡುತ್ತಿದ್ದ ವ್ಯಕ್ತಿಯೊಬ್ಬ 1997ರ ಏಪ್ರಿಲ್ ತಿಂಗಳಿನಲ್ಲಿ ಮೃತಪಟ್ಟಿದ್ದನು. ಈ ವೇಳೆ ನಡೆಸಿದ್ದ ಮರಣೋತ್ತರ ಪರೀಕ್ಷೆಯಲ್ಲಿ ಆತನ ದೇಹದ ಮೇಲೆ ಯಾವುದೇ ಗಾಯಗಳಾಗಿಲ್ಲ ಎಂಬುದು ಸ್ಪಷ್ಟವಾಗಿ ತಿಳಿದುಬಂದಿತ್ತು. ಅಲ್ಲದೆ ವಿಪರೀತವಾಗಿ ಮದ್ಯ ಸೇವನೆ ಮಾಡಿರುವುದೇ ಸಾವಿಗೆ ಕಾರಣ ಎಂಬುದು ವರದಿಯಲ್ಲಿ ಬಯಲಾಗಿತ್ತು.
- Advertisement 4
ಇತ್ತ ವ್ಯಕ್ತಿ ಸಾವನ್ನಪ್ಪಿದ ಬಳಿಕ ಆತನ ಕುಟುಂಬಸ್ಥರು ರಾಷ್ಟ್ರೀಯ ಗ್ರಾಹಕ ವ್ಯಾಜ್ಯಗಳ ಪರಿಹಾರ ಆಯೋಗ(ಎನ್ಸಿಡಿಆರ್ ಸಿ) ಮೊರೆ ಹೋಗಿದ್ದರು. ಅಲ್ಲಿ ಕುಟುಂಬಕ್ಕೆ ವಿಮೆ ನೀಡಲಾಗದು ಎಂದು ಆದೇಶ ನೀಡಿತ್ತು. ಈ ಆದೇಶವನ್ನು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿಗಳಾದ ಎಂ.ಎಂ ಶಾಂತನಗೌಡರ್ ಹಾಗೂ ವಿನೀತ್ ಸರಣ್ ಅವರಿದ್ದ ಪೀಠ ಎತ್ತಿ ಹಿಡಿದಿದೆ.
ವಿಮಾ ಪಾಲಿಸಿಯ ನಿಯಮಗಳ ಪ್ರಕಾರ ಇಂತಹ ಪ್ರಕರಣದಲ್ಲಿ ವಿಮೆ ಹಣ ಸಿಗಲ್ಲ ಎಂದು ಪೀಠ ಸ್ಪಷ್ಟಪಡಿಸಿದೆ.