ರಾಯಚೂರು: ಮಹಾಮಾರಿ ಕೋವಿಡ್-19 ಸೋಂಕಿನಿಂದ ಗುಣಮುಖನಾಗಿದ್ದ ವ್ಯಕ್ತಿ ನೇಣಿಗೆ ಶರಣಾಗಿರುವ ಘಟನೆ ಜಿಲ್ಲೆಯ ಸಿಂಧನೂರು ತಾಲೂಕಿನ ರಾಗಲಪರ್ವಿ ಗ್ರಾಮದಲ್ಲಿ ನಡೆದಿದೆ.
65 ವರ್ಷದ ವ್ಯಕ್ತಿ ತಮ್ಮ ಮನೆಯಲ್ಲೇ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾನೆ. ಬಳ್ಳಾರಿಯಲ್ಲಿ ಕ್ವಾರಂಟೈನ್ ಆಗಿದ್ದ ವೃದ್ಧನಿಗೆ ಕೋವಿಡ್-19 ಪಾಸಿಟಿವ್ ದೃಢವಾಗಿತ್ತು. ಕ್ವಾರಂಟೈನ್ ಅವಧಿ ಮುಗಿದು ಸೋಂಕಿನಿಂದ ಗುಣಮುಖನಾಗಿದ್ದ. ಆದರೆ ಗುಣಮುಖರಾದರೂ ಜನರು ಬೇರೆ ದೃಷ್ಟಿಯಿಂದ ನೋಡುತ್ತಿದ್ದ ಕಾರಣ ಮಾನಸಿಕವಾಗಿ ನೊಂದಿದ್ದರು ಎಂಬ ಮಾಹಿತಿ ಲಭಿಸಿದೆ.
- Advertisement 2
ಸೋಂಕಿನಿಂದ ಗುಣಮುಖರಾಗಿ ಕ್ವಾರಂಟೈನ್ ಅವಧಿ ಮುಗಿಸಿ ರಾಗಲಪರ್ವಿ ಆಗಮಿಸಿದ ಬಳಿಕ ಮನನೊಂದು ಸಾವಿಗೆ ಶರಣಾಗಿದ್ದಾನೆ. ಬಳಗಾನೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಈ ಕುರಿತು ತನಿಖೆ ನಡೆಸಿದ್ದಾರೆ. ರಾಯಚೂರು ಜಿಲ್ಲೆಯ ಸಿಂಧನೂರು ತಾಲೂಕಿನಲ್ಲಿ ದಾಖಲಾದ ಮೊದಲ ಕೋವಿಡ್-19 ಪ್ರಕರಣ ಇದಾಗಿತ್ತು.