ಬೆಳಗಾವಿ: ಬುಲೆರೋ ಮತ್ತು ಟಾಟಾ ಏಸ್ ನಡುವೆ ಡಿಕ್ಕಿಯಾದ ಪರಿಣಾಮ ಏಳು ಮಂದಿ ಮೃತಪಟ್ಟಿರುವ ದಾರುಣ ಘಟನೆ ಬೆಳಗಾವಿಯ ಸವದತ್ತಿ ಪಟ್ಟಣದ ಹೊರವಲಯದಲ್ಲಿ ನಡೆದಿದೆ.
ಸವದತ್ತಿ-ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ಈ ಅಪಘಾತ ನಡೆದಿದ್ದು, ಟಾಟಾ ಏಸ್ ಚಾಲಕ ಮತ್ತು ಆರು ಮಹಿಳೆಯರು ಸೇರಿ ಒಟ್ಟು ಏಳು ಮಂದಿ ಸಾನ್ನಪ್ಪಿದ್ದಾರೆ. ಮೃತರೆಲ್ಲರೂ ರಾಮದುರ್ಗ ತಾಲೂಕಿನ ಚಿಂಚನೂರು ಗ್ರಾಮದ ನಿವಾಸಿಗಳು ಎಂದು ತಿಳಿದುಬಂದಿದೆ.
- Advertisement 2
- Advertisement 3
ಟಾಟಾ ಏಸ್ನಲ್ಲಿ ಧಾರವಾಡದ ಮೊರಬ ಗ್ರಾಮಕ್ಕೆ ಕೂಲಿ ಕೆಲಸಕ್ಕೆಂದು ಹೋಗುತ್ತಿದ್ದರು. ಇತ್ತ ಸವದತ್ತಿಯಿಂದ ಧಾರವಾಡಕ್ಕೆ ಬುಲೆರೋ ತೆರಳುತ್ತಿತ್ತು. ಈ ವೇಳೆ ಸವದತ್ತಿ-ಧಾರವಾಡ ರಾಜ್ಯ ಹೆದ್ದಾರಿಯಲ್ಲಿ ಬುಲೆರೋ ವಾಹನಕ್ಕೆ ಟಾಟಾ ಏಸ್ ಡಿಕ್ಕಿ ಹೊಡೆದಿದೆ. ಪರಿಣಾಮ ಸ್ಥಳದಲ್ಲಿಯೇ ಆರು ಮಂದಿ ಸಾವನ್ನಪ್ಪಿದ್ದು, 10ಕ್ಕೂ ಹೆಚ್ಚು ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ.
- Advertisement 4
ಕೂಡಲೇ ಗಾಯಗೊಂಡವರನ್ನು ಸವದತ್ತಿ ತಾಲೂಕು ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ. ಆದರೆ ಚಿಕಿತ್ಸೆ ಫಲಿಸದೆ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ. ಹೀಗಾಗಿ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ. ಆಸ್ಪತ್ರೆ ಬಳಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ.
ಈ ಕುರಿತು ಸವದತ್ತಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಸ್ಥಳಕ್ಕೆ ಎಎಸ್ಪಿ ಅಮರನಾಥ್ ರೆಡ್ಡಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.