ಮಂಗಳೂರು: ಹೊರ ರಾಜ್ಯದಿಂದ ಬಂದವರಿಗೆ, ಕೊರೊನಾ ಸೋಂಕಿತ ವ್ಯಕ್ತಿಯ ಸಂಪರ್ಕ ಇರುವವರಿಗೆ ಕ್ವಾರಂಟೈನ್ ಸಾಮಾನ್ಯ. ಆದರೆ ಮಂಗಳೂರಿನ ಪಿಲಿಕುಳ ಮೃಗಾಲಯದಲ್ಲಿ ಪ್ರಾಣಿಗಳ ಕ್ವಾರಂಟೈನ್ಗೆ ವ್ಯವಸ್ಥೆ ಮಾಡಿಕೊಳ್ಳಲಾಗುತ್ತಿದೆ.
ಪಿಲಿಕುಳ ಮೃಗಾಲಯದಲ್ಲಿ ಇರುವ ಪ್ರಾಣಿಗಳಿಗೆ ಕ್ವಾರಂಟೈನ್ ಇಲ್ಲ. ಬದಲಾಗಿ ದೇಶದ ಬೇರೆ ಬೇರೆ ರಾಜ್ಯಗಳಿಂದ ಕರೆ ತರುವ ಪ್ರಾಣಿಗಳಿಗೆ ಕ್ವಾರಂಟೈನ್ ಮಾಡಲು ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ.
- Advertisement 2
- Advertisement 3
ಬೇರೆ ಮೃಗಾಲಯದಿಂದ ಕರೆ ತರುವ ಪ್ರಾಣಿ, ಪಕ್ಷಿ, ಹಾವುಗಳನ್ನು ನೇರವಾಗಿ ಪಿಲಿಕುಳದಲ್ಲಿ ಮೊದಲೇ ಇರುವ ಪ್ರಾಣಿ, ಪಕ್ಷಿ, ಹಾವುಗಳ ಜೊತೆಗೆ ಬಿಡದೆ ಕ್ವಾರಂಟೈನ್ ಕೇಂದ್ರಕ್ಕೆ ಕಳುಹಿಸಲಾಗುತ್ತದೆ. ಅಲ್ಲಿ ತಜ್ಞರು ಆರೋಗ್ಯ ತಪಾಸಣೆ ನಡೆಸಿ, ಯಾವುದೇ ರೋಗದ ಲಕ್ಷಣ ಕಂಡು ಬಾರದಿದ್ದರೆ ಇತರ ಪ್ರಾಣಿಗಳ ಜೊತೆಗೆ ಬಿಡಲಾಗುತ್ತದೆ.
- Advertisement 4
ಪ್ರಾಣಿಗಳ ಆರೋಗ್ಯ ದೃಷ್ಟಿಯಿಂದ ಕ್ವಾರಂಟೈನ್ ವ್ಯವಸ್ಥೆ ಮಾಡಲಾಗುತ್ತಿದ್ದು, ಇದಕ್ಕಾಗಿ ಈಗಾಗಲೇ ಹೊಸ ಕಟ್ಟಡ ನಿರ್ಮಾಣ ಆಗುತ್ತಿದೆ. ಇದು ಪೂರ್ಣವಾದ ಬಳಿಕ ಇತರ ಮೃಗಾಲಯದಿಂದ ತಂದ ಪ್ರಾಣಿಗಳನ್ನು ಕ್ವಾರಂಟೈನ್ ಮಾಡಲಾಗುತ್ತದೆ.