ಗದಗ: ಎರಡು ದಿನ ಸುರಿದ ಭಾರೀ ಮಳೆಗೆ ಮನೆಯ ಗೋಡೆ ನೆನೆದು ಕುಸಿತವಾಗಿದ್ದು, ಕ್ಷಣಾರ್ಧದಲ್ಲಿ 6 ಜನ ಪ್ರಾಣಾಪಾಯದಿಂದ ಪಾರಾಗಿರುವ ಘಟನೆ ಜಿಲ್ಲೆಯ ನರಗುಂದ ತಾಲೂಕಿನ ಲಖಮಾಪುರ ಗ್ರಾಮದಲ್ಲಿ ನಡೆದಿದೆ.
ಕಮಲವ್ವ ಮಡಿವಾಳ ಅವರ ಮನೆಗೊಡೆ ಕುಸಿತವಾಗಿದೆ. ಲಖಮಾಪುರ ಗ್ರಾಮದಲ್ಲಿ ಕುಸಿತವಾದ ಮನೆಗೋಡೆ ಒಳಭಾಗದಲ್ಲಿ 6 ಜನ ಮಲಗಿದ್ದರು. ಈ ವೇಳೆ ಮಳೆಯಲ್ಲಿ ನೆನೆದಿದ್ದ ಗೋಡೆ ಕುಸಿದಿದೆ. ಅದೃಷ್ಟವಶಾತ್ ಗೋಡೆ ಹೊರಭಾಗಕ್ಕೆ ಬಿದ್ದಿದ್ದು, ಕುಸಿತವಾಗುತ್ತಿದ್ದಂತೆ ಕುಟುಂಬ ಎದ್ದು ಓಡಿದೆ. ಇದರಿಂದ ಭಾರೀ ಅನಾಹುತ ತಪ್ಪಿದೆ ಎನ್ನಲಾಗುತ್ತಿದೆ.
- Advertisement 2
- Advertisement 3
ಕಳೆದ ಬಾರಿ ಮಲಪ್ರಭಾ ನದಿ ಪ್ರವಾಹಕ್ಕೆ ಮನೆ ಕಳೆದುಕೊಂಡು ತಗಡು ಶೀಟ್ ಹಾಕಿಕೊಂಡು ಜೀವನ ನಡೆಸುತ್ತಿದ್ದ ಎದುರಿನ ಮನೆಯವರೂ ಶಬ್ಧಕ್ಕೆ ಬೆಚ್ಚಿಬಿದ್ದಿದ್ದಾರೆ. ಈ ಘಟನೆ ಬಗ್ಗೆ ಸಂಬಂಧಿಸಿದ ಅಧಿಕಾರಿಗಳಿಗೆ ಫೋನ್ ಮಾಡಿದರೂ ಗ್ರಾಮಲೆಕ್ಕಾಧಿಕಾರಿ ಅಥವಾ ತಹಶೀಲ್ದಾರ್ ಯಾವೊಬ್ಬ ಅಧಿಕಾರಿಯೂ ಸ್ಥಳಕ್ಕೆ ಬಂದಿಲ್ಲ ಎಂಬ ಆರೋಪ ಕೇಳಿಬರುತ್ತಿದೆ.