ತುಮಕೂರು: ಕೋವಿಡ್ ಕೇರ್ ಸೆಂಟರಲ್ಲಿ ಸೋಂಕಿತರ ರಂಜನೆಗಾಗಿ ರಸಮಂಜರಿ ನಡೆಸಲಾಗಿದೆ. ಮಧುಗಿರಿ ತಾಲೂಕಿನ ಬಡವನಹಳ್ಳಿ ಕೇಂದ್ರದಲ್ಲಿ ಈ ರೀತಿಯ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ.
ರಿಯಾಲಿಟಿ ಶೋ ಗಾಯಕ ಕಂಬದ ರಂಗಯ್ಯ ಗೊಂಬೆ ಹೇಳತೈತೆ ಹಾಡು ಸೇರಿದಂತೆ ಹಲವು ಹಾಡು ಹಾಡಿ ಸೋಂಕಿತರಿಗೆ ರಂಜಿಸಿದ್ದಾರೆ. ಅದೇ ರೀತಿ ಮಧುಗಿರಿ ಎಸಿ ಸೋಮಪ್ಪ ಕೂಡ ಹಳೆ ಸಿನೆಮಾ ಹಾಡನ್ನು ಹಾಡಿ ತಲೆದೂಗುವಂತೆ ಮಾಡಿದ್ದಾರೆ.
- Advertisement 2
- Advertisement 3
ಕೋವಿಡ್ ಕೇರ್ ಸೆಂಟರಲ್ಲಿ 80 ಕ್ಕೂ ಹೆಚ್ಚು ಸೋಂಕಿತರಿದ್ದು ಎಲ್ಲರ ಮಾನಸಿಕ ಆರೋಗ್ಯ ವೃದ್ದಿ ರಸಮಂಜರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಮಧುಗಿರಿ ತಾಲೂಕಿನಲ್ಲಿ 04 ಕೋವಿಡ್ ಕೇರ್ ಸೆಂಟರ್ ಇದ್ದು ತಾಲೂಕು ಆಡಳಿತ ಸೋಂಕಿತರ ಮಾನಸಿಕ ಆರೋಗ್ಯ ವೃದ್ಧಿಗಾಗಿ ಈ ರೀತಿಯ ಕಾರ್ಯ ಕ್ರಮ ನಿರಂತರವಾಗಿ ನಡೆಸಿಕೊಂಡು ಬರುತ್ತಿದೆ.
- Advertisement 4
ಭಾರತದಲ್ಲಿ ದೈನಂದಿನ ಕೊರೊನಾ ವೈರಸ್ ಪ್ರಕರಣಗಳು ಇಳಿಕೆಯಾಗುತ್ತಿದ್ದು, ಶನಿವಾರ ಮುಂಜಾನೆ 8 ಗಂಟೆಗೆ ಮುಕ್ತಾಯವಾದ 24 ಗಂಟೆಗಳ ಅವಧಿಯಲ್ಲಿ ದೇಶದಲ್ಲಿ 1,20,529 ಕೇಸ್ ದಾಖಲಾಗಿವೆ. ಅಲ್ಲದೆ, 3,380 ಮಂದಿ ಸಾವನ್ನಪ್ಪಿದ್ದಾರೆಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯ ಮಾಹಿತಿ ನೀಡಿದೆ.
India reports 1,20,529 new #COVID19 cases, 1,97,894 discharges, and 3,380 deaths in the last 24 hours, as per Health Ministry
Total cases: 2,86,94,879
Total discharges: 2,67,95,549
Death toll: 3,44,082
Active cases: 15,55,248
Total vaccination: 22,78,60,317 pic.twitter.com/oF9tm1scaX
— ANI (@ANI) June 5, 2021
ದೇಶದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2,86,94,879ಕ್ಕೆ ಏರಿಕೆಯಾಗಿದ್ದು, ಒಟ್ಟು ಸಾವಿಗೀಡಾದವರ ಸಂಖ್ಯೆ 3,44,082ಕ್ಕೆ ತಲುಪಿದೆ. ದೇಶದಲ್ಲಿ ದೈನಂದಿನ ಸೋಂಕಿತರ ಸಂಖ್ಯೆ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ಸಕ್ರಿಯ ಪ್ರಕರಣಗಳ ಸಂಖ್ಯೆ 15,55,248ಕ್ಕೆ ಏರಿಕೆಯಾಗಿದೆ. ಈ ನಡುವೆ ಕಳೆದ 24 ಗಂಟೆಗಳಲ್ಲಿ 1,97,894 ಮಂದಿ ಗುಣಮುಖರಾಗುವುದರೊಂದಿಗೆ ಈವರೆಗೂ ಚೇತರಿಸಿಕೊಂಡವರ ಸಂಖ್ಯೆ 2,67,95,549ಕ್ಕೆ ತಲುಪಿದೆ.