ಬೆಂಗಳೂರು: ಹಿರಿಯ ನಿರ್ಮಾಪಕ, ಫಿಲ್ಮ್ ಚೇಂಬರ್ ಮಾಜಿ ಅಧ್ಯಕ್ಷ ಬಿ. ವಿಜಯ್ ಕುಮಾರ್ ನಿಧನರಾಗಿದ್ದಾರೆ.
ಹೃದಯಾಘಾತ ಸಂಭವಿಸಿದ್ದರಿಂದ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಸಾಗರ್ ಆಸ್ಪತ್ರೆಯಲ್ಲಿ ರಾತ್ರಿ 9:20ಕ್ಕೆ ಕೊನೆಯುಸಿರೆಳೆದಿದ್ದಾರೆ. ಇಂದು ಜಯನಗರದಲ್ಲಿ ಅಂತ್ಯಕ್ರಿಯೆ ನಡೆಸಲು ಕುಟುಂಬಸ್ಥರು ತೀರ್ಮಾನಿಸಿದ್ದಾರೆ.
- Advertisement 2
ವಿಷ್ಣುವರ್ಧನ್ ಅವರಿಗೆ ಬಹಳ ಆಪ್ತರಾಗಿದ್ದ ವಿಜಯ್ ಕುಮಾರ್, ವಿಷ್ಣು ಅಭಿನಯಿಸಿದ ಸಾಕಷ್ಟು ಸಿನಿಮಾಗಳ ನಿರ್ಮಾಪಕರಾಗಿದ್ದರು. ಸಿಂಹಾದ್ರಿಯ ಸಿಂಹ, ಲಯನ್ ಜಗಪತಿ ರಾವ್. ಮೌನಗೀತೆ, ಜಗದೇಕ ವೀರ ಸೇರಿ ಹಲವು ಚಿತ್ರಗಳನ್ನ ನಿರ್ಮಿಸಿದ್ದರು. ಇದನ್ನೂ ಓದಿ: ತಪ್ಪು ಸರಿಗಳ ಲೆಕ್ಕ ಆ ಭಗವಂತನ ಬಳಿ ಇರುತ್ತೆ: ರಚಿತಾ ರಾಮ್
- Advertisement 3
ಸ್ವಚ್ಛ ಭಾರತ ಇವರ ನಿರ್ಮಾಣದ ಕೊನೆಯ ಚಿತ್ರವಾಗಿತ್ತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷರಾಗಿ, ಹಾಗೂ ದಕ್ಷಿಣ ಭಾರತ ಚಲನಚಿತ್ರ ವಾಣಿಜ್ಯ ಮಂಡಳಿಯ ಫಿಲ್ಮ್ ಫೆಡರೇಷನ್ ಆಫ್ ಇಂಡಿಯಾದ ಉಪಾಧ್ಯಕ್ಷರಾಗಿಯೂ ಸೇವೆ ಸಲ್ಲಿಸಿದ್ದರು.